
ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪ್ರಜ್ವಲ್ ರೇವಣ್ಣ ಗೆದ್ದಾಗಿದೆ. ಆದ್ರೆ ಅವರ ಎಂಪಿ ಸ್ಥಾನ ಅನರ್ಹಗೊಳಿಸುವಂತೆ ಕಾಂಗ್ರೆಸ್ ಕಾರ್ಯಕರ್ತ ದೇವರಾಜ ಗೌಡ ಸಲ್ಲಿಸಿದ್ದ ಎಲೆಕ್ಷನ್ ಪಿಟಿಷನ್ ಅರ್ಜಿ ಈಗ ಹೈಕೋರ್ಟ್ ಅಂಗಳಕ್ಕೆ ಬಂದಿದೆ.
ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ ವೇಳೆ ಸುಳ್ಳು ದಾಖಲೆ ಸಲ್ಲಿಕೆ ಮಾಡಿದ ಅರೋಪದ ಮೇಲೆ ದೇವರಾಜ ಗೌಡ ಕಳೆದ ವಾರವೇ ಇಪಿ ಫೈಲ್ ಮಾಡಿದ್ದಾರೆ. ಪ್ರಜ್ವಲ್ ತನ್ನ ಅನೇಕ ಅಕ್ರಮ ಆಸ್ತಿಗಳ ಮಾಹಿತಿ ಮುಚ್ಚಿಟ್ಟಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ರೆಪ್ರೆಸೆಂಟೇಷನ್ ಆಫ್ ಪೀಪಲ್ ಆ್ಯಕ್ಟ್ ಮತ್ತು ಆ್ಯಂಟಿ ಕರಪ್ಷನ್ ಆಕ್ಟ್ ಉಲ್ಲಂಘನೆ ಮಾಡಿರೋ ಆರೋಪದ ಮೇಲೆ ದೂರು ನೀಡಿದ್ದಾರೆ. ಹೈ ಕೋರ್ಟ್ ವಿಶೇಷ ಪೀಠದಲ್ಲಿ ಈ ಕೇಸ್ ವಿಚಾರಣೆಗೆ ಬರಲಿದೆ.
ಇನ್ನು ದೇವರಾಜ ಗೌಡ ಅರ್ಜಿಯ ಜೊತೆ, ಪ್ರಜ್ವಲ್ ಭ್ರಷ್ಟಚಾರ ಮಾಡಿ ಹಣ ಸಂಪಾದನೆ ಮಾಡಿದ್ದಾರೆ ಎನ್ನಲಾದ ದಾಖಲೆಗಳನ್ನ ಕೋರ್ಟ್ಗೆ ಸಲ್ಲಿಕೆ ಮಾಡಿದ್ದಾರೆ. ಪ್ರಕರಣದ ವಿಚಾರಣೆಗೆ ಕೋರ್ಟ್ ಇನ್ನೂ ದಿನಾಂಕವನ್ನು ನಿಗದಿ ಮಾಡಿಲ್ಲ.
ಪ್ರಜ್ವಲ್ ರೇವಣ್ಣ ತಮ್ಮ ಚುನಾವಣಾ ಅಫಿಡವಿಟ್ನಲ್ಲಿ ಸುಮಾರು 12ಕ್ಕೂ ಹೆಚ್ಚು ಸುಳ್ಳು ಮಾಹಿತಿ ನೀಡಿದ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ದೇವರಾಜ ಗೌಡ ಮುಖ್ಯ ಚುನಾವಣಾ ಆಯೋಗಕ್ಕೆ ಪ್ರಜ್ವಲ್ ರೇವಣ್ಣ ವಿರುದ್ಧ ದೂರು ನೀಡಿದ್ದರು. ಈ ಬಗ್ಗೆ ಪರಿಶೀಲನೆ ಮಾಡಿದ್ದ ಚುನಾವಣಾ ಆಯೋಗ, ಪ್ರಜ್ವಲ್ ರೇವಣ್ಣ ಸಂಸದ ಸ್ಥಾನದ ಅನರ್ಹತೆ ಬಗ್ಗೆ ಹೈಕೋರ್ಟ್ನಲ್ಲಿ ಪ್ರಶ್ನಿಸಿಲು ಸೂಚಿಸಿತ್ತು, ಅದರಂತೆ ಆದಾಯ ತೆರಿಗೆ ಇಲಾಖೆ ಮತ್ತು ಲೋಕಾಯುಕ್ತದಲ್ಲಿ ದಾಖಲೆಗಳನ್ನು ಕೇಳಿತ್ತು.














