
ಬೆಳ್ತಂಗಡಿ : KSRTC ಬಸ್ ನಿರ್ವಾಹಕನಿಗೆ ನಾಲ್ವರು ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
KSRTC ಬಸ್ಸು ಧರ್ಮಸ್ಥಳದಿಂದ ಮಂಗಳೂರು ಕಡೆಗೆ ಹೋಗುತ್ತಿದ್ದು, ಬಸ್ಸು ನಿರ್ವಾಹಕ ವಿಜಯ ಕುಮಾರ್ ಮೇಲೆ ಗಂಭೀರ ಹಲ್ಲೆ ನಡೆದಿದೆ. ಯಾವುದೊ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆದಿದೆ ಎಂದು ತಿಳಿದು ಬಂದಿದ್ದು, ಗಾಯಾಳು ವಿಜಯಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














