
ಬೆಳ್ತಂಗಡಿ : ಬೆಳ್ತಂಗಡಿ ನಗರ ಪಂಚಾಯತ್ ನಲ್ಲಿರುವ ಶ್ರೀ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಮೆರ್ಟಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯಕ್ಕೆ ದಿಢೀರ್ ಭೇಟಿ ನೀಡಿದ ಶಾಸಕರಾದ ಶ್ರೀ ಹರೀಶ್ ಪೂಂಜರವರು ಬೀಳುವ ಸ್ಥಿತಿಯಲ್ಲಿರುವ ಹಾಸ್ಟೆಲ್ ಕಟಡವನ್ನು ಪರಿಶೀಲಿಸಿ ತಕ್ಷಣವೇ ಸರಿಪಡಿಸುವಂತೆ ಗುತ್ತಿಗೆದಾರರಾದ ರಾಜ್ ಪ್ರಕಾಶ್ ಇವರಿಗೆ ಸೂಚಿಸಿದರು ಹಾಗೂ ವಿದ್ಯಾರ್ಥಿಗಳು ನೀಡಿದ ದೂರುಗಳನ್ನು ಆಲಿಸಿ ಸಂಬಂಧ ಪಟ್ಟ ಅಧಿಕಾರಿಗಳಿಗೆ ಗಮನಹರಿಸುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ನಗರ ಪಂಚಾಯತ್ ಸದಸ್ಯರಾದ ಶರತ್ ಕುಮಾರ್, ಲೋಕೇಶ್, ಜಯಾನಂದ ಗೌಡ ಇವರು ಜೊತೆಗಿದ್ದರು.
















