
ಕಡಬ: ಸರಸ್ವತೀ ವಿದ್ಯಾಲಯ ಕಡಬ ಇಲ್ಲಿ ಶಿಕ್ಷಕರಿಗೆ ಯೋಗ ಕಾರ್ಯಗಾರವನ್ನು ನಡೆಸಲಾಯಿತು. ಈ ಕಾರ್ಯಾಗಾರದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಯೋಗ ಶಿಕ್ಷಕ ಚಂದ್ರಶೇಖರ್ ಇವರು ಶಿಕ್ಷಕರಿಗೆ ಸೂರ್ಯನಮಸ್ಕಾರ, ಪ್ರಾಣಾಯಾಮ ಮುಂತಾದವುಗಳ ಬಗ್ಗೆ ತಿಳಿಸಿಕೊಟ್ಟರು. ಈ ಕಾರ್ಯಗಾರದಲ್ಲಿ ಪ್ರಾಥಮಿಕ, ಪ್ರೌಢ ಹಾಗು ಕಾಲೇಜು ವಿಭಾಗದ ಶಿಕ್ಷಕರು ಸಕ್ರಿಯವಾಗಿ ಪಾಲ್ಗೊಂಡರು.










