
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು 94 ಸಿ ಅರ್ಜಿಗಳ ಕುಂದು ಕೊರತೆ ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮ ಬೆಳ್ತಂಗಡಿ ಮಿನಿ ವಿಧಾನಸೌಧದಲ್ಲಿ ನಡೆಯಿತು. ತಾಲೂಕಿನ ಎಲ್ಲಾ ಗ್ರಾಮಗಳ ವಿಎ ಹಾಗೂ ರೆವೆನ್ಯೂ ಅಧಿಕಾರಿಗಳ ಸಮ್ಮುಖದಲ್ಲಿ ಅರ್ಜಿಗಳ ಕುರಿತಾದ ವಿಚಾರಣೆ ನಡೆಯಿತು. ನಂತರ ಹಕ್ಕು ಪತ್ರಗಳ ವಿತರಣೆಯನ್ನು ಶಾಸಕರಾದ ಶ್ರೀ ಹರೀಶ್ ಪೂಂಜರವರು ನೆರವೇರಿಸಿದರು. ಜಿಲ್ಲಾ ಸಹಾಯಕ ಕಮಿಷನರ್ ಶ್ರೀ ಕೃಷ್ಣ ಮೂರ್ತಿ, ಬೆಳ್ತಂಗಡಿ ತಹಶೀಲ್ದಾರ್ ಶ್ರೀ ಗಣಪತಿ ಶಾಸ್ತ್ರಿ ಉಪಸ್ಥಿತರಿದ್ದರು.











