Wednesday, September 9, 2026
ಸುದ್ದಿ

ಕಲ್ಲಡ್ಕ ಶ್ರೀರಾಮ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ಶಾಲಾ ಚುನಾವಣೆ- ಕಹಳೆ ನ್ಯೂಸ್

ದಿನಾಂಕ 22/06/2019 ರಂದು ಕಲ್ಲಡ್ಕ ಶ್ರೀರಾಮ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ಶಾಲಾ ಚುನಾವಣೆ ನಡೆಯಿತು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಅಭ್ಯರ್ಥಿಗಳು ಎಂಟು ಮತಕ್ಷೇತ್ರಗಳಲ್ಲಿ ಚುನಾವಣೆಗೆ ನಿಂತಿದ್ದು ನಾಲ್ಕು ಮತಗಟ್ಟೆಗಳನ್ನು ರಚಿಸಿ ಚುನಾವಣೆ ನಡೆಸಲಾಯಿತು. ವಿದ್ಯಾರ್ಥಿಗಳಲ್ಲಿ ಉತ್ತಮ ನಾಯಕನ ಆಯ್ಕೆ , ಮತದಾನ, ಪ್ರಜಾಪ್ರಭುತ್ವ ಮಹತ್ವ ಹಾಗೂ ಚುನಾವಣಾ ಪ್ರಕ್ರಿಯೆಯನ್ನು ತಿಳಿಸುವ ನಿಟ್ಟಿನಲ್ಲಿ ಈ ಮತದಾನವನ್ನು ಹಮ್ಮಿಕೊಳ್ಳಲಾಗಿತ್ತು. ಎಲ್ಲಾ ವಿದ್ಯಾರ್ಥಿಗಳು ತಮ್ಮ ಗುರುತಿನ ಚೀಟಿಯೊಂದಿಗೆ ಶಿಸ್ತಿನಿಂದ ಸರದಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಅಧಿಕಾರಿಗಳು ಶಾಲಾ ಚುಣಾವಣೆ ಯಶಸ್ವಿಯಾಗುವಲ್ಲಿ ಸಹಕರಿಸಿದರು.

ಮತದಾನದ ಎಣಿಕೆಯು ದಿನಾಂಕ 24/06/2019 ರ ಸೋಮವಾರದಂದು ಶಾಲಾ ಮುಖ್ಯ ಶಿಕ್ಷಕರ ಉಪಸ್ಥಿತಿಯಲ್ಲಿ ವೇದವ್ಯಾಸ ಧ್ಯಾನ ಮಂದಿರದಲ್ಲಿ ನಡೆಸಲಾಗುವುದು.