
ಮುರ್ಡೇಶ್ವರ: ಮುರ್ಡೇಶ್ವರ ರಾಷ್ಟ್ರೀಯ ಹೆದ್ದಾರಿಯಿಂದ ದೇವಸ್ಥಾನ ಕೂಡು ರಸ್ತೆಯ ಅಗಲೀಕರಣ ಕಾಮಗಾರಿಯು ಹಲವು ಸ್ಥಳೀಯ ಸಮಸ್ಯೆಗಳಿಂದ ಸ್ಥಗಿತಕೊಂಡಿದ್ದು, ಅವ್ಯವಸ್ಥೆಗೆ ಕಾರಣವಾಗಿದೆ. ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ನಿನ್ನೆ ಮುರ್ಡೇಶ್ವರದ ಹೈವೇ ಹೋಟೆಲ್ ಸಭಾಂಗಣದಲ್ಲಿ, ಭಟ್ಕಳ ಶಾಸಕ ಸುನಿಲ್ ನಾಯ್ಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನೇತೃತ್ವದಲ್ಲಿ, ಭಟ್ಕಳ ಉಪವಿಭಾಗಾಧಿಕಾರಿಗಳ ಸಮ್ಮುಖದಲ್ಲಿ ಸಭೆಯನ್ನು ಕರೆದು, ಸಮಸ್ಯೆ ಇರುವಂತಹ ಸ್ಥಳ ಪರಿಶೀಲನೆ ನಡೆಸಿ ಕಾಮಗಾರಿ ಪ್ರಾರಂಭವಾಗಲು ಅಗತ್ಯ ಕ್ರಮ ಕೈಗೊಂಡಿದ್ದಾರೆ.


















