
ಸುಬ್ರಹ್ಮಣ್ಯ : ಸುಬ್ರಹ್ಮಣ್ಯ ಶ್ರೀ ವಾಸುಕಿ ಯಕ್ಷಗಾನ ಮಂಡಳಿ ಇದರ ಆಶ್ರಯದಲ್ಲಿ, ಜುಲೈ 21ರಂದು ‘ಶೂರ್ಪನಖಾ ಮಾನಭಂಗ’ ಎಂಬ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶ್ರೀ ಬಸವೇಶ್ವರ ದೇವಸ್ಥಾನ ಬಸವಮೂಲೆ ಕುಲಕುಂದ ಎಂಬಲ್ಲಿ ನಡೆಯಲಿದೆ. ಶ್ರೀ ವಾಸುಕಿ ಯಕ್ಷಗಾನ ಮಂಡಳಿ ವತಿಯಿಂದ ಸರ್ವರಿಗೂ ಸ್ವಾಗತ ಕೋರಲಾಗಿದೆ.
















