
ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಎಮ್ಎಸ್ಡಬ್ಲ್ಯೂ ವಿಭಾಗದ ವತಿಯಿಂದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸಮಾಜ ಕಾರ್ಯದ ಕುರಿತು ಅರಿವು ಮೂಡಿಸುವ ಸಲುವಾಗಿ ಜುಲೈ 20 ರಂದು ಪುತ್ತೂರು ತಾಲೂಕಿನ ಮಹಿಳಾ ಸಾಂತ್ವನ ಕೇಂದ್ರಕ್ಕೆ ಭೇಟಿ, ಅಧ್ಯಯನ ಕಾರ್ಯಕ್ರಮವನ್ನು ಸಂಯೋಜಿಸಲಾಯಿತು.

ವಿದ್ಯಾರ್ಥಿಗಳು ಮಹಿಳಾ ಸಾಂತ್ವನ ಕೇಂದ್ರದ ಕಾರ್ಯವೈಖರಿ ಕುರಿತು ಮಾಹಿತಿ ಪಡೆದುಕೊಂಡರು. ಮಹಿಳಾ ಸಾಂತ್ವನ ಕೇಂದ್ರದ ಆಪ್ತ ಸಮಾಲೋಚಕಿ ನಿಶಾಪ್ರಿಯ ಮತ್ತು ಸಮಾಜ ಕಾರ್ಯಕರ್ತೆ ರೇಖಾ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾಲೇಜಿನ ಎಮ್ಎಸ್ಡಬ್ಲ್ಯೂ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರತಿಭಾ ಮತ್ತು ದೀಪಿಕಾ ಈ ಅಧ್ಯಯನ ಕಾರ್ಯಕ್ರಮವನ್ನು ಸಂಯೋಜಿಸಿದರು.









