Saturday, May 2, 2026
ಸುದ್ದಿ

ಹುತಾತ್ಮ ಯೋಧರನ್ನು ಸ್ಮರಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ – ಕಹಳೆ ನ್ಯೂಸ್

ನವದೆಹಲಿ: ಭಾರತದ ಸೈನಿಕ ಸಾಮರ್ಥ್ಯಕ್ಕೆ ಕನ್ನಡಿಯಾಗಿದ್ದ ಕಾರ್ಗಿಲ್ ವಿಜಯೋತ್ಸವಕ್ಕೆ ಇಂದು 20 ವರ್ಷಗಳಾಗಿದೆ. ಈ ಹಿನ್ನೆಲೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೈನಿಕರ ತ್ಯಾಗ ಮತ್ತು ಬಲಿದಾನವನ್ನು ಶ್ಲಾಘಿಸಿದ್ದಾರೆ.

ಟ್ವೀಟರ್‍ ನಲ್ಲಿ ಈ ಕುರಿತಂತೆ ಟ್ವೀಟ್ ಮಾಡಿರುವ ಕೋವಿಂದ್ ಅವರು, ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ನಮ್ಮ ನಮನಗಳು ಮತ್ತು ಅವರ ತ್ಯಾಗ ಮತ್ತು ಬಲಿದಾನಕ್ಕೆ ಇಡೀ ದೇಶ ಕೃತಜ್ಞರಾಗಿದ್ದೇವೆ. ಭಾರತವನ್ನು ರಕ್ಷಿಸಿದ ಸೈನಿಕ ಶೌರ್ಯಕ್ಕೆ ನಮ್ಮ ಸಲಾಂ ಎಂದು ಟ್ವೀಟ್ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇಂದು ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತೀಯ ಸೈನಿಕರು ವಿಜಯಪತಾಕೆಯನ್ನು ಹಾರಿಸಿದ ಹೆಮ್ಮೆಯ ದಿನವಾಗಿದೆ. ಪಾಕಿಸ್ತಾನದ ಮೇಲೆ ಭಾರತೀಯ ಯೋಧರು ವಿಜಯ ಸಾಧಿಸಿದ ಸ್ಮರಣಾರ್ಥ ಇಂದು ದೇಶದೆಲ್ಲೆಡೆ `ಕಾರ್ಗಿಲ್ ವಿಜಯ್ ದಿವಸ್’ ಆಚರಣೆ ಮಾಡಲಾಗುತ್ತಿದೆ. ಭಾರತೀಯ ಸೈನ್ಯದ ಶೌರ್ಯ, ಸೈನಿಕರ ಸಾಹಸವನ್ನು ಜಗತ್ತಿಗೆ ಪರಿಚಯಿಸಿದ್ದು ಕಾರ್ಗಿಲ್ ಯುದ್ಧ, ಹೀಗಾಗಿ ಪ್ರತಿ ವರ್ಷ ಜುಲೈ 26ರಂದು ಸಂಭ್ರಮದಿಂದ ಭಾರತೀಯರು ಕಾರ್ಗಿಲ್ ವಿಜಯ್ ದಿವಸ್ ಆಚರಿಸುತ್ತಾರೆ.