Recent Posts

Saturday, May 9, 2026
ಸುದ್ದಿ

ಮುಂಬೈನಲ್ಲಿ ಮತ್ತೆ ಭಾರೀ ಮಳೆ; ಜನಜೀವನ ಅಸ್ತವ್ಯಸ್ತ, ಸಂಚಾರಕ್ಕೆ ಅಡ್ಡಿ – ಕಹಳೆ ನ್ಯೂಸ್

ಮುಂಬೈ: ವಾಣಿಜ್ಯ ನಗರಿ ಮತ್ತೆ ವರುಣನ ಆರ್ಭಟಕ್ಕೆ ತತ್ತರಿಸಿ ಹೋಗಿದ್ದು, ಹಲವಾರು ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ಇದರಿಂದಾಗಿ ರೈಲು ಸಂಚಾರ ಸ್ಥಗಿತಗೊಂಡಿದೆ.

ಭಾರೀ ಮಳೆಯಿಂದಾಗಿ 11 ವಿಮಾನಗಳ ಹಾರಾಟ ರದ್ದಾಗಿದ್ದು, ಸುಮಾರು 17 ವಿಮಾನಗಳು ಮುಂಬೈ ವಿಮಾನ ನಿಲ್ದಾಣದತ್ತ ಕಳುಹಿಸಲಾಗಿದೆ. ಥಾಣೆ, ಕಲ್ಯಾಣ್ ಸೇರಿದಂತೆ ಹಲವು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು, ರಕ್ಷಣಾ ಕಾರ್ಯಕ್ಕೆ ಎನ್‍ಡಿಆರ್‍ಎಫ್ ಪಡೆ ಆಗಮಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು