
ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಅಳಿಯ, ಯಶಸ್ವಿ ಉದ್ಯಮಿ ವಿ ಜಿ ಸಿದ್ಧಾರ್ಥ ಅವರು ಕಾಣೆಯಾಗಿದ್ದಾರೆ. ಅವರನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ರಾಜ್ಯ ಸರಕಾರದ ಜೊತೆ ಕೇಂದ್ರ ಸರಕಾರದ ಸಹಾಯವನ್ನು ಕೋರಲಾಗಿದೆ. ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನೊಳಗೊಂಡ ರಾಜ್ಯದ ಬಿಜೆಪಿ ಸಂಸದರ ತಂಡವು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಇಂದು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಮಾಡಿದರು.















