Monday, May 4, 2026
ಸುದ್ದಿ

ಹಿಂದು ಕಾರ್ಯಕರ್ತರ ಮೇಲೆ ಹೇರಿರುವ ಕೇಸ್ ಹಿಂಪಡೆಯಲು ಶಾಸಕಿ ರೂಪಾಲಿ ನಾಯ್ಕರಿಂದ ಸಿಎಂಗೆ ಮನವಿ : ಮುಖ್ಯಮಂತ್ರಿಗಳಿಂದ ಸಕಾರಾತ್ಮಕ ಸ್ಪಂದನೆ – ಕಹಳೆ ನ್ಯೂಸ್

ಬೆಂಗಳೂರು: 2017ರ ಡಿಸೆಂಬರ್ ತಿಂಗಳಿನಲ್ಲಿ ಉತ್ತರಕನ್ನಡ ಜಿಲ್ಲೆಯ, ಹೊನ್ನಾವರ ತಾಲ್ಲೂಕಿನ, ಪರೇಶ ಮೇಸ್ತಾ ಎಂಬ ಯುವಕನ ಸಾವಿನ ವಿಷಯಕ್ಕೆ ಸಂಬಂಧಿಸಿದಂತೆ, ಪ್ರತಿಭಟಿಸಿದ್ದ ಅನೇಕ ಹಿಂದೂ ಕಾರ್ಯಕರ್ತರ ಮೇಲೆ ಕ್ರಿಮಿನಲ್ ಹಾಗೂ ಸಾಮಾಜಿಕ ಜಾಲತಾಣಕ್ಕೆ ಸಂಬಂಧಿಸಿದಂತೆ, 150 ಕ್ಕೂ ಹೆಚ್ಚೂ ಪ್ರಕರಣಗಳು ದಾಖಲಾಗಿದ್ದವು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2000ಕ್ಕೂ ಅಧಿಕ ಹಿಂದೂ ಯುವಕರ ಮೇಲೆ ಹೇರಿರುವ ಪ್ರಕರಣವನ್ನು ಹಿಂಪಡೆಯುವಂತೆ ಕೋರಿ, ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಮತಿ ರೂಪಾಲಿ ಎಸ್. ನಾಯ್ಕರವರು, ಕರ್ನಾಟಕದ ನೂತನ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪರವರಲ್ಲಿ ದಿನಾಂಕ 29/07/2019 ರಂದು ಭೋಜನ ವಿರಾಮದ ಸಂದರ್ಭದಲ್ಲಿ ಮನವಿ ಸಲ್ಲಿಸಿದ್ದಾರೆ. ಮನವಿಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿದುಬಂದಿದೆ.