
ನವದೆಹಲಿ: ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಜಮ್ಮು-ಶ್ರೀನಗರ್ ರಾಷ್ಟ್ರೀಯ ಹೆದ್ದಾರಿ ಬುಧವಾರ ಬಂದ್ ಮಾಡಲಾಗಿದೆ.
ಜಮ್ಮು-ಕಾಶ್ಮೀರದ ಉದಾಂಪುರ್ ಜಿಲ್ಲೆಯ ಬಾಲ್ಲಿ ನಲ್ಲಾಹ್ ಸಮೀಪದ ಮೋರ್ರಾ ಪಾಸ್ಸಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿತ್ತು. ಹವಾಮಾನ ವೈಪರೀತ್ಯದಿಂದಾಗಿ ಕಟ್ರಾ ಶಾನ್ ಜಿಚಾಟ್ ಸೆಕ್ಟರ್ ನಡುವಿನ ಹೆಲಿಕಾಪ್ಟರ್ ಸೇವೆಯನ್ನೂ ಕೂಡಾ ಸ್ಥಗಿತಗೊಳಿಸಲಾಗಿದೆ. ಭೂಕುಸಿತದಿಂದಾಗಿ ಸಂಚಾರಕ್ಕೆ ತೀವ್ರ ಅಡ್ಡಿಯಾಗಿದೆ ಎಂದು ವರದಿ ತಿಳಿಸಿದೆ.









