
ಉಡುಪಿ: ಉಡುಪಿಯಲ್ಲಿ ಸುರಿತ್ತಿರುವ ಭಾರೀ ಮಳೆಗೆ, ಕುರ್ಲದಿಂದ ತಿರುವನಂತಪುರಕ್ಕೆ ತೆರಳುವ ನೇತ್ರಾವತಿ ಎಕ್ಸ್ಪ್ರೆಸ್ ರೈಲು ಮೇಲೆ ಉಡುಪಿ ರೈಲ್ವೆ ನಿಲ್ದಾಣದ ಸಮೀಪ ಮರದ ಕೊಂಬೆಯೊಂದು ಬಿದ್ದಿದೆ. ರೈಲಿನಲ್ಲಿ ಪ್ರಯಾಣಿಸುತ್ತಿರುವ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾದ ಘಟನೆ ಇಂದು ಬೆಳಗ್ಗೆ 5.30ರ ಸುಮಾರಿಗೆ ನಡೆದಿದೆ.
ಪ್ರಯಾಣಿಕರು ಯಾವುದೇ ಹಾನಿ ಇಲ್ಲದೆ ಪಾರಾಗಿದ್ದು, ರೈಲು ತನ್ನ ಪ್ರಯಾಣ ಮುಂದುವರಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.















