
ನವದೆಹಲಿ : ರಕ್ಷಾ ಬಂಧನದ ದಿನವಾದ ಗುರುವಾರ ಆಮ್ಆದ್ಮಿ ಸರ್ಕಾರ ದೆಹಲಿಯ ಮಹಿಳೆಯರಿಗೆ ಭರ್ಜರಿ ಉಡುಗೊರೆ ಪ್ರಕಟಿಸಿದೆ.
ಆಗಸ್ಟ್ 29ರಿಂದ ಜಾರಿಗೆ ಬರುವಂತೆ ದೆಹಲಿಯಾದ್ಯಂತ ಮಹಿಳೆಯರು ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.
ಇಲ್ಲಿನ ಛತ್ರಾಸಾಲ್ ಸ್ಟೇಡಿಯಂನಲ್ಲಿ ಸ್ವಾತಂತ್ರ್ಯ ದಿನದ ಧ್ವಜಾರೋಹಣದ ಬಳಿಕ ಮಾತನಾಡಿದ ಕೇಜ್ರಿವಾಲ್ ಈ ವಿಷಯ ಪ್ರಕಟಿಸಿದರು.














