
ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿ, ಪೆರುವಾಜೆ ಗ್ರಾಮದ ಪೆಲತ್ತಡ್ಕದ ಕೇಶವ ಕಿಶೋರ್ ಅವರು ಜೂನ್ ತಿಂಗಳಲ್ಲಿ ನಡೆದ ಸಿಎ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರು ಮಂಗಳೂರು ಹಾಗೂ ಬೆಂಗಳೂರಿನಲ್ಲಿ ಸಿಎ ತರಬೇತಿಯನ್ನು ಪಡೆದಿದ್ದು, ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರೊ. ವೆಂಕಟರಮಣ ಭಟ್ ಹಾಗೂ ಜ್ಯೋತಿ ಲಕ್ಷ್ಮೀ ದಂಪತಿಯ ಪುತ್ರ.














