
ಆಗಸ್ಟ್ 28 ರಂದು ಕರ್ನಾಟಕ ಮುಜರಾಯಿ, ಬಂದರು ಮತ್ತು ಮೀನುಗಾರಿಕೆ ಖಾತೆ ಸಚಿವ ಮಾನ್ಯ ಕೋಟ ಶ್ರೀನಿವಾಸ್ ಪೂಜಾರಿ ಅವರನ್ನು ಬೆಂಗಳೂರಿನಲ್ಲಿ ಮಾತೆ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಧ್ಯಕ್ಷರಾದ ಶ್ರೀ ಜಯಂತ ನಡುಬೈಲ್ ಮತ್ತು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷರಾದ ಪೀತಾಂಬರ ಹೇರಾಜೆ ಅವರು ಭೇಟಿಯಾಗಿ ಅಭಿನಂದಿಸಿದರು. ಭೇಟಿಯ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಭಿವೃದ್ಧಿಯ ಬಗ್ಗೆ ಚರ್ಚಿಸಿ ವಿಶ್ವ ಬಿಲ್ಲವರ ಪ್ರಗತಿಯ ಶಕ್ತಿ ಕೇಂದ್ರವಾಗಲಿರುವ ಶ್ರೀ ಕ್ಷೇತ್ರದ ಅಭಿವೃದ್ಧಿಗೆ ಸಹಕಾರವನ್ನು ಸಚಿವರಲ್ಲಿ ಕೋರಿದಾಗ ಸಂಪೂರ್ಣ ಸಹಕಾರ ನೀಡುವುದಾಗಿ ಸಚಿವರು ಭರವಸೆ ನೀಡಿದರು.















