Tuesday, March 17, 2026
ಸುದ್ದಿ

ತಿರುಮಲ ದೇವಾಲಯದಲ್ಲಿ ಹಿಂದೂಯೇತರ ನೌಕರರು ಕೆಲಸ ಮಾಡುವಂತಿಲ್ಲ – ವೈಎಸ್ ಜಗನ್ ಸರ್ಕಾರದ ಮಹತ್ವದ ನಿರ್ಧಾರ- ಕಹಳೆ ನ್ಯೂಸ್

ತಿರುಮಲದಲ್ಲಿ ಸಂಚರಿಸುವ ಆಂಧ್ರಪ್ರದೇಶ ಸರ್ಕಾರದ ಸಾರಿಗೆ ಬಸ್‍ಗಳ ಟಿಕೆಟ್‍ನಲ್ಲಿ ಕ್ರೈಸ್ತ ಮತ ಪ್ರಚಾರ ನಡೆಯುತ್ತಿದೆ ಎಂಬ ಆರೋಪ ಕೆಲದಿನಗಳ ಹಿಂದೆ ಕೇಳಿ ಬಂದಿತ್ತು. ಜೊತೆಗೆ ಬಿಜೆಪಿಯಿಂದ ಸಾರಿಗೆ ಸಂಸ್ಥೆ ಎದುರು ಪ್ರತಿಭಟನೆ ಕೂಡ ನಡೆದಿತ್ತು. ಈ ವಿವಾದದ ಬೆನ್ನಲ್ಲೆ ಇದೀಗ ವೈಎಸ್ ಜಗನ್ ನೇತೃತ್ವದ ಸರಕಾರ, ಹೊಸ ಬದಲಾವಣೆ ತರಲು ಮುಂದಾಗಿದೆ.

“ದೇವಾಲಯದಲ್ಲಿ ಕಾರ್ಯ ನಿರ್ವಹಿಸುವ ಹಿಂದೂಯೇತರ ನೌಕರರನ್ನು ಕೆಲಸದಿಂದ ತೆಗೆದು ಹಾಕಲಾಗುವುದು” ಎಂದು ಆಂಧ್ರಪ್ರದೇಶದ ಮುಖ್ಯ ಕಾರ್ಯದರ್ಶಿ ಎಲ್.ವಿ.ಸುಬ್ರಹ್ಮಣ್ಯಂ ಹೇಳಿದ್ದಾರೆ. ಇವರು ಟಿಟಿಡಿ ಅಧಿಕಾರಿಗಳನ್ನು ಭೇಟಿಯಾದ ನಂತರ ಈ ತೀರ್ಮಾಣವನ್ನ ಕೈಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸಾರ್ವಜನಿಕರು ತಮ್ಮ ಧರ್ಮಗಳನ್ನು ಬದಲಾಯಿಸಲು ಸ್ವತಂತ್ರರು, ಯಾರೂ ಅದನ್ನು ವಿರೋಧಿಸಲು ಸಾಧ್ಯವಿಲ್ಲ. ಆದರೆ, ಹಿಂದೂಯೇತರರು ಇಲ್ಲಿ ಕೆಲಸವನ್ನು ಮಾಡುತ್ತಿದ್ದರೆ, ಅಂತವರನ್ನು ಇಲ್ಲಿ ಮುಂದುವರಿಸಲು ಸಾಧ್ಯವಿಲ್ಲ. ಏಕೆಂದರೆ ಅದು ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸುತ್ತದೆ ” ಎಂದು ದೇವಾಲಯದ ಆಡಳಿತ ಅಧಿಕಾರಿ ಅನಿಲ್ ಕುಮಾರ್ ಸಿಂಘಾಲ್ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು

ಇನ್ನು ಟಿಕೇಟ್ ವಿಚಾರಕ್ಕೆ ಆರ್‍ಟಿಸಿ ಡಿಪೋ ವ್ಯವಸ್ಥಾಪಕರು ಪ್ರತಿಕ್ರಿಯಿಸಿದ್ದು, ನಮ್ಮ ಟಿಕೆಟ್‍ನಲ್ಲಿ ಯಾವುದೇ ಜಾಹೀರಾತು ಇರುವುದಿಲ್ಲ, ಇದು ಬೇರೆ ಡಿಪೋದ ಬಸ್ ಟಿಕೆಟ್ ಆಗಿದೆ ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದಿದ್ದಾರೆ.