
ಬೆಂಗಳೂರು : ದೇಶಾದ್ಯಂತ ಗೌರಿ ಮತ್ತು ಗಣೇಶ ಹಬ್ಬವನ್ನು ಆಚರಿಸಲಾಗುತ್ತಿದ್ದು, ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶುಭ ಕೋರಿದ್ದಾರೆ.
ನಾಡಿನ ಸಮಸ್ತ ಜನತೆಗೆ ಗೌರಿ ಮತ್ತು ಗಣೇಶ ಹಬ್ಬವು, ವಿಘ್ನಗಳನ್ನು ನಿವಾರಿಸಿ, ಸುಖ ಶಾಂತಿ ಹಾಗೂ ನೆಮ್ಮದಿಯನ್ನು ತರಲಿ ಎಂದು ಬಿ.ಎಸ್. ಯಡಿಯೂರಪ್ಪ ಹಾರೈಸಿದ್ದಾರೆ.
ಮಣ್ಣಿನ ಗೌರಿ ಗಣೇಶ ಮೂರ್ತಿಗಳನ್ನು ಬಳಸಿ, ಪರಿಸರ ಸ್ನೇಹಿ ಹಬ್ಬವನ್ನು ಆಚರಿಸಲು ಮುಖ್ಯಮಂತ್ರಿಗಳು ಪತ್ರಿಕಾ ಪ್ರಕಟಣೆ ಮೂಲಕ ಕರೆ ನೀಡಿದ್ದಾರೆ.









