

ಪುತ್ತೂರು: ಸಂತ ಫಿಲೋಮಿನಾ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳು ಅಕ್ಟೋಬರ್ 31 ರಂದು ಪುತ್ತೂರು ತಾಲೂಕಿನ ವಿವಿಧ ಸರಕಾರಿ ಕಛೇರಿಗಳು ಮತ್ತು ಶಾಲೆಗಳಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆಯ ಮಹತ್ವವನ್ನು ತಿಳಿಸಿ, ಏಕತಾ ಪ್ರತಿಜ್ಞೆಯನ್ನು ಬೋಧಿಸುವ ಕಾರ್ಯಕ್ರಮವನ್ನು ಸಂಯೋಜಿಸಿದರು.














