Wednesday, March 18, 2026
ಸುದ್ದಿ

ಜ್ಞಾನೋದಯ ಬೆಥನಿ ನೆಲ್ಯಾಡಿಯ ವಿದ್ಯಾರ್ಥಿಗಳಾದ ಆದರ್ಶ್ಶೆಟ್ಟಿ ಮತ್ತು ಮೇಘ ಮತ್ತಾಯಿ ರಾಜ್ಯ ಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್

ನೆಲ್ಯಾಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರಿಡಾ ಕೂಟವು ದಿನಾಂಕ ಅಕ್ಟೋಬರ್ ೩೦ ಮತ್ತು ೩೧ ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಜರುಗಿತು.

ಪ್ರೌಢ ಶಾಲಾ ೧೪ ರ ವಯೋಮಿತಿಯ ಬಾಲಕರ ೮ನೇ ತರಗತಿ ವಿಭಾಗದಲ್ಲಿ ಜ್ಞಾನೋದಯ ಬೆಥನಿ ಪದವಿ ಪೂರ್ವ ಕಾಲೇಜಿನ ೮ನೇ ತರಗತಿ ವಿದ್ಯಾರ್ಥಿ ಆದರ್ಶ್ ಶೆಟ್ಟಿ ಎತ್ತರ ಜಿಗಿತದಲ್ಲಿ ಪ್ರಥಮ, ೬೦೦ ಮೀ ಓಟದಲ್ಲಿ ತೃತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

೧೭ ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಮೇಘ ಮತ್ತಾಯಿ ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ . ಅದೇ ರೀತಿ ೧೪ ರ ವಯೋಮಾನದ ಪ್ರಾಥಮಿಕ ಬಾಲಕರ ವಿಭಾಗದಲ್ಲಿ ನಿಖಿಲ್ ತೃತೀಯ ಸ್ಥಾನವನ್ನು ಗಳಿಸಿದ್ದಾರೆ. ಸಂಸ್ಥೆಯ ಸಂಚಾಲಕರಾದ ರೆ| ಫಾ| ಡಾ| ವರ್ಗೀಸ್ ಕೈಪನಡುಕ್ಕ ಒಐಸಿ, ಪ್ರಾಂಶುಪಾಲರಾದ ರೆ|ಫಾ| ಮ್ಯಾಥ್ಯೂ ಪ್ರಫುಲ್ ಒ.ಐ.ಸಿ, ಖಜಾಂಜಿ ರೆ|ಫಾ ಐಸಕ್ ಸಾಮ್ ಒಐಸಿ,ಯವರು ಅಭಿನಂದನೆಗಳನ್ನು ತಿಳಿಸಿರುತ್ತಾರೆ. ದೈಹಿಕ ಶಿಕ್ಷಕರಾದ ಮನೋಜ್, ಸುದರ್ಶನ್, ಮತ್ತು ಶ್ರೀಮತಿ ಅಲ್ಪೋನ್ಸಾರವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು.

ಜಾಹೀರಾತು
ಜಾಹೀರಾತು