
ಉಡುಪಿ : ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಕೃತಕ ಉಸಿರಾಟದಲ್ಲೇ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಮಣಿಪಾಲ್ ಕೆಎಂಸಿ ವೈದ್ಯರ ತಂಡ ತಿಳಿಸಿದೆ.
ಉಸಿರಾಟದ ಸಮಸ್ಯೆ ಹಿನ್ನೆಲೆ ಶ್ರೀಗಳು ಕೆಎಂಸಿ ಆಸ್ಪತ್ರೆಗೆ ದಾಖಲಾಗಿ ಎಂಟು ದಿನಗಳು ಕಳೆದಿದ್ದು ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆಗೊಳಿಸಲಾಗಿದೆ.
ಪೇಜಾವರ ಶ್ರೀಗಳ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿಲ್ಲ, ಕೃತಕ ಉಸಿರಾಟದಲ್ಲೇ ಚಿಕಿತ್ಸೆ ಮುಂದುವರೆಸಲಾಗಿದೆ,. ಆದರೆ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮಣಿಪಾಲದ ಕೆಎಂಸಿ ವೈದ್ಯರ ತಂಡ ತಿಳಿಸಿದೆ.









