
ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಯ ಮಂಗಳೂರು ಗೋಲಿಬಾರ್ ನಲ್ಲಿ ಮೃತಪಟ್ಟ ಇಬ್ಬರ ಕುಟುಂಬಕ್ಕೆ ಇಂದು ಮಂಗಳೂರಿನಲ್ಲಿ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ನಿಂದ ಪರಿಹಾರ ವಿತರಿಸಲಾಯಿತು.
ಮಂಗಳೂರಿಗೆ ಆಗಮಿಸಿದ ತೃಣಮೂಲ ಕಾಂಗ್ರೆಸ್ ನಿಯೋಗ ಮೃತರಿಬ್ಬರ ಕುಟುಂಬಗಳಿಗೆ ಪಕ್ಷದ ವತಿಯಿಂದ ತಲಾ 5 ಲಕ್ಷ ರೂ ಪರಿಹಾರವನ್ನು ವಿತರಿಸಿದರು.
ಕುದ್ರೋಳಿಯಲ್ಲಿರುವ ನೌಸೀನ್ ಮತ್ತು ಕಂದಕ್ ನಲ್ಲಿರುವ ಜಲೀಲ್ ಮನೆಗೆ ತೆರಳಿ ಕುಟುಂಬಿಕರಿಗೆ ಸಾಂತ್ವನ ವ್ಯಕ್ತಪಡಿಸಿ ತಲಾ 5 ಲಕ್ಷ ರೂ ಪರಿಹಾರದ ಚೆಕ್ ವಿತರಿಸಿದರು.
ಮಾಜಿ ಕೇಂದ್ರ ಸಚಿವ ದಿನೇಶ್ ತ್ರಿವೇದಿ ಮತ್ತು ರಾಜ್ಯಸಭಾ ಸದಸ್ಯ ನದಿಮುಲ್ ಹಖ್ ಅವರು ಇಂದು ಮುಂಜಾನೆ ಮಂಗಳೂರಿಗೆ ಆಗಮಿಸಿ, ಮೃತರ ಮನೆಗೆ ಭೇಟಿ ನೀಡಿದರು.









