Friday, May 15, 2026
ಸುದ್ದಿ

ಪೇಜಾವರ ಮಠದಲ್ಲಿ ವಿಷ್ಣುಸಹಸ್ರನಾಮ ಪಾರಾಯಣ – ಕಹಳೆ ನ್ಯೂಸ್

ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿಯ ಆರೋಗ್ಯ ಕ್ಷೀಣಿಸಿರುವ ಹಿನ್ನೆಲೆ ಇಂದು ಬೆಳಗ್ಗೆ ಅವರನ್ನ ಮಠಕ್ಕೆ ಕರೆತರಲಾಗಿದ್ದು, ಅಲ್ಲೇ ಚಿಕಿತ್ಸೆ ಮುಂದುವರೆದಿದೆ. ಈ ಮಧ್ಯೆ ಮಠದಲ್ಲಿ ಅಷ್ಠಮಠಾಧೀಶರಿಂದ ವಿಷ್ಣು ಸಹಸ್ರನಾಮ ಪಾರಾಯಣ ನಡೆಯುತ್ತಿದೆ.

ಶ್ರೀಗಳ ಪೂರ್ವಾಶ್ರಮದ ಸಂಬಂಧಿಕರು ಮಠದಲ್ಲಿದ್ದು, ಕಣ್ಣೀರು ಹಾಕುತ್ತಿದ್ದಾರೆ. ಮಠದ ಸುತ್ತಮುತ್ತಲಿನ ಅಂಗಡಿಗಳನ್ನ ವ್ಯಾಪಾರಸ್ಥರು ಸ್ವಯಂಪ್ರೇರಿತರಾಗಿ ಬಂದ್​ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇಂದು ಬೆಳಗ್ಗೆ ಶಾಸಕ ರಾಮದಾಸ್​​ ಮಠಕ್ಕೆ ಭೇಟಿ ನೀಡಿದ್ದಾರೆ. ಶೀಘ್ರದಲ್ಲೇ ಸಿಎಂ ಬಿ.ಎಸ್​ ಯಡಿಯೂರಪ್ಪ ಕೂಡ ಮಠಕ್ಕೆ ಆಗಮಿಸಲಿದ್ದಾರೆ. ಕೇವಲ ಗಣ್ಯರಿಗೆ ಮಾತ್ರ ಶ್ರೀಗಳ ಭೇಟಿಗೆ ಅವಕಾಶ ನೀಡಲಾಗಿದೆ. ಮಠದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್​ ಏರ್ಪಡಿಸಲಾಗಿದೆ.