Sunday, April 26, 2026
ಸುದ್ದಿ

ಸೋಮವಾರ ದೆಹಲಿಗೆ ಸಿದ್ದರಾಮಯ್ಯ: ನಾಳೆಯೇ ಕೆಪಿಸಿಸಿ ನೂತನ ಅಧ್ಯಕ್ಷರ ನೇಮಕ– ಕಹಳೆ ನ್ಯೂಸ್

ರಾಜ್ಯ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಶೀಘ್ರದಲ್ಲೇ ನಡೆಯಲಿದೆ ಎನ್ನಲಾಗಿದೆ. ಸೋಮವಾರ ಸಂಜೆ ದಿಲ್ಲಿಗೆ ಬರುವಂತೆ ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆ ನೀಡಿದ್ದು, ಈ ಹಿನ್ನೆಲೆ ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಸೋಮವಾರ ದೆಹಲಿಗೆ ಸಿದ್ದರಾಮಯ್ಯ: ನಾಳೆಯೇ ಕೆಪಿಸಿಸಿ ನೂತನ ಅಧ್ಯಕ್ಷರ ನೇಮಕ?
ಬೆಂಗಳೂರು: ಹೈಕಮಾಂಡ್ ಆಹ್ವಾನದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಸೋಮವಾರ ಸಂಜೆ ದೆಹಲಿಗೆ ತೆರಳಲಿದ್ದಾರೆ. ಕೆಪಿಸಿಸಿ ನೂತನ ಅಧ್ಯಕ್ಷರ ನೇಮಕ ಸಂಬಂಧ ಹೈಕಮಾಂಡ್ ಬುಲಾವ್‌ ನೀಡಿದೆ ಎಂದು ತಿಳಿದುಬಂದಿದೆ.

ಕೆಪಿಸಿಸಿ ನೂತನ ಅಧ್ಯಕ್ಷರ ನೇಮಕ ಸಂಬಂಧ ದಿಲ್ಲಿಗೆ ಬರಲು ಆಯ್ದ ರಾಜ್ಯ ನಾಯಕರಿಗೆ ಹೈಕಮಾಂಡ್ ಬುಲಾವ್ ನೀಡಿದೆ. ಈ ಹಿನ್ನೆಲೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸೋಮವಾರ ಸಂಜೆ ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳಲಿದ್ದಾರೆ. ವರಿಷ್ಟರ ಸೂಚನೆಯಂತೆ ಸೋಮವಾರ ದಿಲ್ಲಿಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.

ಶನಿವಾರ ರಾತ್ರಿ ವೇಣುಗೋಪಾಲ್, ಮಲ್ಲಿಕಾರ್ಜುನ ಖರ್ಗೆ ಜತೆ ಚರ್ಚೆ ಬಳಿಕ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸೂಚನೆಯಂತೆ ಹೈಕಮಾಂಡ್ ಮಾಜಿ ಸಿಎಂ ಸಿದ್ದರಾಮಯ್ಯಗೆ ಬುಲಾವ್‌ ನೀಡಿದೆ. ಮಂಗಳವಾರದಿಂದ ಸೋನಿಯಾಗಾಂಧಿ 10 ದಿನಗಳ ಕಾಲ ವಿದೇಶ ಪ್ರವಾಸ ಮಾಡಲಿದ್ದಾರೆ. ಈ ಹಿನ್ನೆಲೆ ಅಷ್ಟರೊಳಗೆ ಕೆಪಿಸಿಸಿ ನಾಯಕ ಹುದ್ದೆ ಫೈನಲ್ ಮಾಡುವ ಸಾಧ್ಯತೆ ಇದೆ.

ರಾಜಕಾರಣದಲ್ಲಿ ಯಾರೂ ಸನ್ಯಾಸಿಗಳಲ್ಲ: ಡಿಕೆಶಿ ಡೈಲಾಗ್‌ ಪುನರಾವರ್ತಿಸಿದ ಎಸ್‌ಆರ್‌ ಪಾಟೀಲ್‌

ಈ ಹಿನ್ನೆಲೆ ಹಲವು ದಿನಗಳಿಂದ ಕುತೂಹಲ ಮೂಡಿಸಿದ್ದ ರಾಜ್ಯ ಕಾಂಗ್ರೆಸ್ ನಾಯಕತ್ವ ಉತ್ತರ ಕರ್ನಾಟಕ ಭಾಗದ ಲಿಂಗಾಯತರಿಗೆ ಸಿಗಲಿದೆಯೋ ಅಥವಾ ದಕ್ಷಿಣದ ಒಕ್ಕಲಿಗರಿಗೋ ಎಂಬುದು ಸೋಮವಾರ ಅಂತಿಮ ನಿರ್ಧಾರವಾಗಲಿದೆ ಎನ್ನಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಒಕ್ಕಲಿಗರಿಗೋ, ಲಿಂಗಾಯತರಿಗೋ? ಸಿಡಬ್ಲ್ಯೂಸಿ ಸಭೆಯತ್ತ ಎಲ್ಲರ ಚಿತ್ತ

ಜತೆಗೆ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನೀಡಿರುವ ರಾಜೀನಾಮೆ ವಿಚಾರದಲ್ಲೂ ವರಿಷ್ಠರ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಎಂಬಿ ಪಾಟೀಲ್‌ಗೆ ಕೆಪಿಸಿಸಿ ಪಟ್ಟ ? ಡಿಕೆಶಿ ‘ಕೈ’ ಬಿಡಲು ಕಾರಣವಿದು !