
ಮಂಗಳೂರು, ಜನವರಿ 15 : ಯುವಜನರಲ್ಲಿ ಸಾಮಾಜಿಕ ಸೇವಾ ಪ್ರಜ್ಞೆಯನ್ನು ಘೋಷಿಸುವ ‘ಉತ್ತಮನಾಗು ಉಪಕಾರಿಯಾಗು’ ಎಂಬ ಸ್ವಾಮಿ ವಿವೇಕಾನಂದರ ಜೀವನ ಸಂದೇಶವನ್ನು ಸಾರುವ ಬೃಹತ್ ಯುವ ಅಭಿಯಾನಕ್ಕೆ ಇದೇ ಬರುವ ಜನವರಿ 17ರಂದು, ಮಂಗಳೂರಿನಲ್ಲಿ, ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ . ಪಿ.ಎಸ್ ಯಡಪಡಿತ್ತಾಯರು ಚಾಲನೆ ನೀಡಲಿದ್ದಾರೆ
ಸ್ವಾಮಿ ವಿವೇಕಾನಂದರ 157ನೇ ಜಯಂತಿ ಮತ್ತು ರಾಷ್ಟ್ರೀಯ ಯುವ ದಿನದ ಅಂಗವಾಗಿ ಅಭಿಯಾನಕ್ಕೆ ಚಾಲನೆ ದೊರೆಯಲಿದೆ. ಯುವಕ-ಯುವತಿಯರು ಸ್ವಾಮಿ ವಿವೇಕಾನಂದರು ಯುವಜನರಿಗೆ ನೀಡಿದ ‘ಉತ್ತಮನಾಗು-ಉಪಕಾರಿಯಾಗು’ ಎಂಬ ಸಂದೇಶವನ್ನು ತಾವು ಪಾಲನೆ ಮಾಡುವ ಸಂಕಲ್ಪ ತೊಡಲಿದ್ದಾರೆ.










