ರಾಮನಗರ: ಬಿಗ್ ಬಾಸ್ ಸೀಸನ್- 5ರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಬಿಗ್ ಬಾಸ್ ಸೆಟ್ ಸುಟ್ಟು ಕರಕಲಾದ ಘಟನೆ ರಾಮನಗರದ ಬಿಡದಿಯಲ್ಲಿರುವ ಇನ್ನೋವೇಟಿವ್ ಫಿಲ್ಮ್ ಸಿಟಿಯಲ್ಲಿ ನಡೆದಿದೆ.
ಸುಮಾರು 3 ಗಂಟೆಗೆ ಬಿಗ್ ಬಾಸ್ ಮನೆಯಲ್ಲಿರುವ ಸ್ವಾಗತ ಕೊಠಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಈ ಅಗ್ನಿ ದುರಂತ ಸಂಭವಿಸಿದೆ. ಸುಮಾರು 13 ಅಗ್ನಿಶಾಮಕ ದಳ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಹಾಸ ಪಡುತ್ತಿದ್ದಾರೆ.
ಇಡೀ ಬಿಗ್ ಬಾಸ್ ಸೆಟ್ಗೆ ಬೆಂಕಿ ಆವರಸಿಕೊಂಡಿದ್ದು, ಮೇಣದ ಮ್ಯೂಸಿಯಂನಲ್ಲಿದ್ದ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಹಲವು ಮೇಣದ ಪ್ರತಿಮೆಗಳು ಬೆಂಕಿಗೆ ಆಹುತಿಯಾಗಿದೆ. ವೀಡಿಯೋ ಎಡಿಟಿಂಗ್ ಹಾಗೂ ಬಿಗ್ ಬಾಸ್ ಮನೆಯ ರೆಸ್ಟ್ ಆವರಣದವರೆಗೂ ಹಾಗೂ ಸ್ಪರ್ಧಿಗಳು ಕೂತು ಹರಟೆ ಹೊಡೆಯುತ್ತಿದ್ದ ಅಂಗಳದವರೆಗೂ ಬೆಂಕಿ ವ್ಯಾಪಿಸಿದೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಹೆಚ್ಚಿನದ್ದಾಗಿ ಮರದ ಹಲಗೆಗಳಿಂದ ಈ ಮನೆ ನಿರ್ಮಿಸಿದ್ದು, ಬಿಗ್ ಬಾಸ್ ಮನೆಯ ಒಳಗೆಲ್ಲ ಬೆಂಕಿ ಆವರಿಸಿಕೊಂಡಿದೆ. ಈಗಾಗಲೇ ಒಟ್ಟು 13 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಈಗ ಬೆಂಕಿ ನಂದಿಸಲು ಮತ್ತೆರಡು ವಾಹನಗಳ ಆಗಮಿಸಿದೆ. ರಾಮನಗರ, ಕನಕಪುರದಿಂದ 9 ಅಗ್ನಿಶಾಮಕ ವಾಹನ, ಬಾಷ್ ಮತ್ತು ಟೊಯೋಟಾ ಕಂಪನಿಗಳ 3 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ನಿಯಂತ್ರಣಕ್ಕೆ ಬಾರದ ಬೆಂಕಿ ನಂದಿಸಲು ಅಗ್ನಿಶಾಮಕ ಪಡೆ ಹರಸಾಹಸ ಪಡುತ್ತಿದ್ದಾರೆ.
ಜಾಹೀರಾತು
ಈ ಅಗ್ನಿ ಅವಘಡದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಅಗ್ನಿ ಅನಾಹುಯತದ ಒಂದಿಷ್ಟು Exclusive ತುಣುಕುಗಳು ಕಹಳೆ ನ್ಯೂಸ್ ನಲ್ಲಿ ಲಭ್ಯ – (Subscribe Our YouTube channel)
ನವದೆಹಲಿ: ವಾಷಿಂಗ್ಟನ್ನ ಹಿಲ್ಟನ್ ಹೋಟೆಲ್ನಲ್ಲಿ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದ ಡಿನ್ನರ್ ಕಾರ್ಯಕ್ರದಲ್ಲಿ ಗುಂಡಿನ ದಾಳಿ ನಡೆದ ಘಟನೆ ಕುರಿತು ಪ್ರಧಾನಿ ಮೋದಿ ಪ್ರತಿಕ್ರಿಯಿಸಿ, ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಸ್ಥಾನವಿಲ್ಲ...
ಚಿಕ್ಕಮಗಳೂರು: ಸಾಂಬಾರ್ ಮಾಡಿಲ್ಲ ಅಂತ ಅಪ್ಪ ಬೈದಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ನಡೆದಿದೆ. ಸೌಜನ್ಯ ಪೂಜಾರಿ (22)...
ಪುತ್ತೂರು : ಪ್ರಾಚೀನವೂ ಪ್ರಸಿದ್ಧವು ಆದ ಸಂಸ್ಕೃತ ಭಾಷೆಯನ್ನು ಸಂಭಾಷಣೆಯ ಮೂಲಕ ಕಲಿಯುವ ಪ್ರಯತ್ನವಾಗಿ "ಸಂಸ್ಕೃತ ಭಾರತೀ" ಎಂಬ ಅಖಿಲ ಭಾರತ ವ್ಯಾಪ್ತಿಯುಳ್ಳ ಸಂಸ್ಥೆಯು ಪುತ್ತೂರಿನಲ್ಲಿ "ದೇವಾಲಯ...
ರಾಯ್ಪುರ: ಛತ್ತೀಸಗಢದಲ್ಲಿ 25 ವರ್ಷದ ಮಹಿಳೆಯೊಬ್ಬಳು ತಾನು ಸಂಬಂಧ ಹೊಂದಿದ್ದ ಕಾನ್ಸ್ಟೆಬಲ್ ಮನೆಗೆ ನುಗ್ಗಿ ಆತನ ಪತ್ನಿ ಮತ್ತು ಮೂವರು ಮಕ್ಕಳಿಗೆ ಚಾಕುವಿನಿಂದ ಇರಿದಿರುವ ಘಟನೆ ನಡೆದಿದೆ. ಆರೋಪಿ...