Recent Posts

Thursday, September 17, 2026
ಸುದ್ದಿ

ಮಂಗಳೂರಿನಲ್ಲಿ ಎರಡು ದಿನಗಳ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶನ ಆರಂಭ-ಕಹಳೆ ನ್ಯೂಸ್

ಮಂಗಳೂರು: ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ, ಇಂದು ದಕ್ಷಿಣ ಜಿಲ್ಲಾ ಹಿಂದೂ ಅಧಿವೇಶನ ಮಂಗಳೂರಿನ ಶ್ರೀ ವೆಂಕಟರಮಣ ದೇವಸ್ಥಾನದ ಸಭಾಗೃಹ, ಡೊಂಗರಕೇರಿ ಪ್ರಾರಂಭವಾಯಿತು. ಈ ಅಧಿವೇಶನದಲ್ಲಿ ಸನಾತನ ಸಂಸ್ಥೆಯ ಸಂತರಾದ ಫ್ರೋ.ರಮಾನಂದ ಗೌಡ, ಹಿಂದೂ ಜನಜಾಗೃತಿ ಸಮಿತಿಯ ಕರ್ನಾಟಕ ರಾಜ್ಯ ಸಮನ್ವಯಕರಾದ ಶ್ರೀ ಗುರುಪ್ರಸಾದ್ ಗೌಡ, ಶ್ರೀ.ಕೃಷ್ಣಮೂರ್ತಿ, ನ್ಯಾಯವಾದಿಗಳು, ಶ್ರೀ.ದಯಾನಂದ ಕತ್ತಲ್ ಸಾರ್, ಅಧ್ಯಕ್ಷರು ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡೆಮಿ ಇವರು ದೀಪಪ್ರಜ್ವಲನೆ ಮಾಡಿದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಹಿಂದೂ ರಾಷ್ಟ್ರದ ಬೇಡಿಕೆಯು ಹಿಂದೂ ಸಂಸ್ಕøತಿಯ ಉಳಿವಿಗಾಗಿ ಮಾತ್ರವಲ್ಲದೇ ಇಡೀ ಮನುಕುಲದ ಉದ್ದಾರಕ್ಕಾಗಿ ಇದೆ.
ಶ್ರೀ. ಗುರುಪ್ರಸಾದ್ ಗೌಡ, ಕರ್ನಾಟಕ ರಾಜ್ಯ ಸಮನ್ವಯಕರು, ಹಿಂದೂ ಜನಜಾಗೃತಿ ಸಮಿತಿ
ಶ್ರೀ.ಗುರುಪ್ರಸಾದ್ ಗೌಡ ಇವರು ಮಾತನಾಡಿ “ಹಿಂದೂ ಅಧಿವೇಶನದ ಉದ್ದೇಶವು ಹಿಂದೂ ರಾಷ್ಟ್ರದ ಬೇಡಿಕೆಯನ್ನು ಮಾಡುವುದಾಗಿದೆ. ಹಿಂದೂ ರಾಷ್ಟ್ರದ ಬೇಡಿಕೆಯು ಕಾನೂನು ಬಾಹಿರವಲ್ಲ. ಕಾನೂನು ಚೌಕಟ್ಟಿನಲ್ಲಿ ಸಂವಿಧಾನಾತ್ಮಕವಾಗಿ ಬೇಡಿಕೆಯನ್ನು ಮಾಡುವುದಾಗಿದೆ. ಜಗತ್ತಿನಲ್ಲಿ ಹಿಂದೂಗಳಿಗೆ ಒಂದೇ ಒಂದು ರಾಷ್ಟ್ರವಿಲ್ಲ. ಹಿಂದೂ ರಾಷ್ಟ್ರದ ವಿಚಾರ ಭಾರತ ಮಾತ್ರವಲ್ಲದೆ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಾಮುಖ್ಯತೆಯನ್ನು ಪಡೆದಿದೆ. ಸೆಕ್ಯುಲರ್ ವ್ಯವಸ್ಥೆಯಿಂದಾಗಿ ಹಿಂದೂ ಧರ್ಮದ ಮೇಲೆ ಅನ್ಯಾಯವಾಗುತ್ತಿದೆ. ಹಿಂದೂ ರಾಷ್ಟ್ರದ ಬೇಡಿಕೆಯು ರಾಜಕೀಯ ವಿಚಾರವಲ್ಲದೇ; ಧರ್ಮಪ್ರೇಮಿ ಹಿಂದೂಗಳ ಮತ್ತು ಹಿಂದೂ ಸಂಸ್ಕøತಿಯ ಉಳಿವಿಗಾಗಿ ಮತ್ತು ಅಖಿಲಮಾನವ ಕುಲದ ಕಲ್ಯಾಣಕ್ಕಾಗಿ ಇದೆ ಎಂದು ವಿಚಾರ ಮಂಡಿಸಿದರು.
ಅಖಂಡ ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಧರ್ಮಾಚರಣೆ ಮಾಡಿ ಸಂಘಟಿತರಾಗೋಣ
ಶ್ರೀ. ದಯಾನಂದ ಕತ್ತಲ್ ಸಾರ್, ಅಧ್ಯಕ್ಷರು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ.
ಭಾರತವು ಜಗತ್ತಿಗೆ ದೇವರಕೋಣೆ.ದೇವರು ಮತ್ತು ದೈವಗಳ ಪೂಜಿಸುವ ಶ್ರೇಷ್ಠವಾದ ಭಾರತೀಯ ಸಂಸ್ಕøತಿ. ಇಡೀ ಮಾನವ ಕುಲವನ್ನು ಸಾತ್ವ್ತಿಕಗೊಳಿಸಲು ಮತ್ತು ಜೀವನದ ಉಧ್ದಾರವಾಗಲು ಸನಾತನ ಹಿಂದೂ ಧರ್ಮದಲ್ಲಿ ಹೇಳಲಾಗುವ ಪ್ರತಿಯೊಂದು ಸಿಧ್ಧಾಂತವನ್ನು ಜೀವನದಲ್ಲಿ ಅಳವಡಿಸಿದರೆ ವ್ಯಕ್ತಿಯ ಜೊತೆಗೆ ಸಮಾಜ, ಮತ್ತು ಇಡೀ ವಿಶ್ವವೇ ಸಾತ್ವ್ತಿಕ ಮತ್ತು ಸುಖೀಯಾಗುವುದು. ಮಾತೃಭೂಮಿ, ಜನ್ಮನೀಡಿದ ಮಾತೆಗೆ ಗೌರವ ನೀಡಲು ಕಲಿಸುವುದು, ಗೋಮಾತೆಯನ್ನು ಪೂಜನೀಯ ಸ್ಥಾನದಲ್ಲಿ ಕಾಣಲು ಕೇವಲ ಸನಾತನ ಹಿಂದೂ ಧರ್ಮದಲ್ಲಿ ಮಾತ್ರ ಸಾಧ್ಯ.ಅಖಂಡ ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಧರ್ಮಾಚರಣೆ ಮಾಡಿ ಸಂಘಟಿತರಾಗೋಣ. ಎಂದು ಕರೆ ನೀಡಿದರು
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಭಗವಂತನ ಆಶೀರ್ವಾದಕ್ಕಾಗಿ ಶ್ರಧ್ದಾ ಭಕ್ತಿಯನ್ನು ಹೆಚ್ಚಿಸಬೇಕು
ಪೂ.ರಮಾನಂದ ಗೌಡ, ಸನಾತನ ಸಂಸ್ಥೆಯ ಸಂತರು.
ಈ ಸಂದರ್ಭದಲ್ಲಿ ಸಂತರಾದ ಪೂ.ರಮಾನಂದ ಗೌಡ ಇವರು ಉಪಸ್ಥಿತಿತರಿಗೆ ಮಾರ್ಗದರ್ಶನ ಮಾಡುತ್ತಾ “ಪ್ರಸ್ತುತ ದೇಶವು ಸಂಧಿಕಾಲದಲ್ಲಿ ಹಾದುಹೋಗುತ್ತಿದೆ. ಧರ್ಮ ಸಂಸ್ಥಾಪನೆಯ ಕಾಲವು ಸಮೀಪಿಸಿದೆ. ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ತನು, ಮನ, ಧನದ ತ್ಯಾಗದ ಜೊತೆಗೆ ಭಗವಂತನ ಆಶೀರ್ವಾದವು ಅಗತ್ಯವಿದೆ ಇದಕ್ಕಾಗಿ ಶ್ರಧ್ಧಾ ಭಕ್ತಿಯನ್ನು ಹೆಚ್ಚಿಸಬೇಕಾಗಿದೆ ಎಂದು ಆಶೀರ್ವಚನ ರೂಪೀ ಮಾರ್ಗದರ್ಶನ ಮಾಡಿದರು.
ಶಾಲೆಗಳಲ್ಲಿ ಭಗವದ್ಗೀತೆಯ ಶಿಕ್ಷಣವನ್ನು ನೀಡುವ ಪಾಠವನ್ನು ಪ್ರಾರಂಭಿಸಬೇಕು ಶ್ರೀ.ಕೃಷ್ಣಮೂರ್ತಿ, ನ್ಯಾಯವಾದಿಗಳು

ನ್ಯಾಯವಾದಿಗಳಾದ ಶ್ರೀ.ಕೃಷ್ಣಮೂರ್ತಿ ಇವರು ಮಾತನಾಡಿ ಇಂದು ಭಾರತವನ್ನು ವಿಭಜಿಸಲಾಗುತ್ತದೆ. ಮತಾಂತರ, ಲವ್ ಜಿಹಾದ್, ಹಿಂದೂ ಕಾರ್ಯಕರ್ತರ ಹತ್ಯೆಯಿಂದ ಹಿಂದೂ ಧರ್ಮದ ಮೇಲೆ ಆಘಾತವಾಗುತ್ತಿದೆ. ಮಾತ್ರವಲ್ಲದೆ ನಾಗರಿಕ ತಿದ್ದುಪಡಿ ಕಾನೂನು ವಿರೋಧಿಸಿ ದೇಶದ ಆಸ್ತಿಪಾಸ್ತಿಗಳನ್ನು ಹಾನಿ ಮಾಡಲಾಗುತ್ತಿದೆ.ಅಖಂಡ ವಿಶ್ವಕ್ಕೆ ಶಾಂತಿಯನ್ನು ನೀಡಿದ ಧರ್ಮ ಅಂದರೆ ಸನಾತನ ಹಿಂದೂ ಧರ್ಮವಿದೆ. ಮುಂದಿನ ಪೀಳಿಗೆಯನ್ನು ಸಾತ್ತ್ವಿಕ ಮಾಡಬೇಕಾದರೆ ಮಕ್ಕಳಿಗೆ ಶಿಕ್ಷಣದಲ್ಲಿ ಭಗವದ್ಗೀತೆಯನ್ನು ಕಲಿಸಿ ದೇಶದ ಭವಿಷ್ಯವನ್ನು ಸುಧೃಢ ಮಾಡಬೇಕಾಗಿದೆ. ಎಂದು ವಿಚಾರ ಮಂಡಿಸಿದರು.

ಇತೀ ತಮ್ಮ ವಿಶ್ವಾಸಿ,
ಶ್ರೀ. ಚಂದ್ರಮೊಗೇರ್,
ಹಿಂದೂ ಜನಜಾಗೃತಿ ಸಮಿತಿ
7204082652