
ಕಡಬ : ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ 113 ರ ಕುಂಡಾಜೆ ಎಂಬಲ್ಲಿ ಇಂದು ರಾತ್ರಿ ಬುಲೆಟ್ ಮತ್ತು ಆಕ್ಟಿವಾ ನಡುವೆ ಮುಖಾಮುಖಿ ಸಂಭವಿಸಿದ್ದು ಪರಿಣಾಮ ಸವಾರರಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಸದ್ಯ ಗಾಯಾಳುಗಳನ್ನು 108 ಆಂಬುಲೆನ್ಸ್ ನಲ್ಲಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ದಿದ್ದು ಸ್ಥಳಕ್ಕ ಕಡಬ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಈ ವೇಳೆ ಕಾರ್ಯಕ್ರಮವೊಂದಕ್ಕೆ ಭಾಗವಹಿಸಿ ಹಿಂದಿರುಗುತ್ತಿದ್ದ ಸುಳ್ಯ ಶಾಸಕ ಎಸ್ ಅಂಗಾರ ತಮ್ಮ ಕಾರ್ ನಿಲ್ಲಿಸಿ ಪೊಲೀಸರು ಹಾಗೂ ಸಾರ್ವಜನಿಕರಲ್ಲಿ ಮಾಹಿತಿ ಪಡೆದುಕೊಂಡರು ಸದ್ಯ ಗಾಯಾಳುಗಳನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಗಾಯಲುಗಳ ವಿವರ ಇನ್ನಷ್ಟೆ ತಿಳಿಯಬೇಕಿದೆ.










