Recent Posts

Sunday, September 13, 2026
ಹೆಚ್ಚಿನ ಸುದ್ದಿ

BREAKING : ಇಂದು 12 ಗಂಟೆಗೆ `ಬಾಬ್ರಿ ಮಸೀದಿ’ ಧ್ವಂಸ ಪ್ರಕರಣದ ಅಂತಿಮ ತೀರ್ಪು : ಎಲ್ಲರ ಚಿತ್ತ ಸಿಬಿಐ ನ್ಯಾಯಾಲಯದ ತೀರ್ಪೀನತ್ತ-ಕಹಳೆ ನ್ಯೂಸ್

ನವದೆಹಲಿ: ದೇಶವೇ ಕುತೂಹಲದಿಂದ ಕಾಯುತ್ತಿರುವ 1992 ರಲ್ಲಿ ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಬಿಐ ವಿಶೇಷ ನ್ಯಾಯಾಲಯ ಇಂದು 12 ಗಂಟೆಗೆ ಅಂತಿಮ ತೀರ್ಪು ಪ್ರಕಟಿಸಲಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸಿಸಿಬಿ ವಿಶೇಷ ಕೋರ್ಟ್​ ನ್ಯಾಯಾಧೀಶ ಎಸ್.ಕೆ. ಯಾದವ್ ನೇತೃತ್ವದ ನ್ಯಾಯಪೀಠವು 28 ವರ್ಷಗಳ ನಂತರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪನ್ನು ಪ್ರಕಟಿಸಲಿದೆ. ತೀರ್ಪು ಪ್ರಕಟಿಸುವ ಸಂದರ್ಭದಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ 32 ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಾಗಿರುವಂತೆ ನಿರ್ದೇಶಿಸಲಾಗಿದೆ.

ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ, ಬಿಜೆಪಿಯ ಹಿರಿಯ ನಾಯಕ ಮುರಳಿ ಮನೋಹರ ಜೋಶಿ, ಕಲ್ಯಾಣ್ ಸಿಂಗ್, ಉಮಾ ಭಾರತಿ, ವಿನಯ್ ಕಟಿಯಾರ್ ಸೇರಿದಂತೆ 32 ಆರೋಪಿಗಳು ಕೋರ್ಟ್​ಗೆ ಹಾಜರಾಗಲಿದ್ದಾರೆ.