Saturday, March 7, 2026
ಹೆಚ್ಚಿನ ಸುದ್ದಿ

ಎಲ್ಲಿ ಮಾಡಿಸ್ಕೊಂಡೆಯಮ್ಮಾ ಬಳೆನ್ನ? ಚಿನ್ನದ್ದಾ?: ಸಿಎಂ ಬಿಎಸ್ ವೈ -ಕಹಳೆ ನ್ಯೂಸ್

ಬೆಂಗಳೂರು: ಏನಮ್ಮಾ, ಎಲ್ಲಿ ಮಾಡಿಸಿಕೊಂಡೆ ಈ ಬಳೆಯನ್ನ? ಚಿನ್ನದ್ದಾ? ಎಷ್ಟು ಈ ಬಳೆಯ ಬೆಲೆ? ಎಂದು ಸಿಎಂ ಬಿ.ಎಸ್‌ ಯಡಿಯೂರಪ್ಪ ನಗೆ ಚಟಾಕಿ ಹಾರಿಸಿದ ಘಟನೆ ಎಂದು ಏಕಲವ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಏಕಲವ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ವಿಜೇತೆ ಖುಷಿ ದಿನೇಶ್ ತಮ್ಮ ಪ್ರಶಸ್ತಿ ಪಡೆಯಲು ಬಂದಾಗ ಸಿಎಂ, ‘ಇಂಥ ಸಮಾರಂಭಕ್ಕೆ ಆರ್ಟಿಫಿಷಿಯಲ್ ಬಳೆ ಹಾಕಿಕೊಂಡು ಬರಬಾರದಮ್ಮಾ, ಚಿನ್ನದ ಬಳೆ ಹಾಕ್ಕೊಂಡು‌ ಬರಬೇಕು’ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಎಂದು ಹಾಸ್ಯ ಮಾಡಿದರು. ನಂತ್ರ ಸಿಎಂ, ನಿನ್ನ ಹೆಸರೇನು? ಯಾವ ಕ್ರೀಡೆಗೆ ನಿನಗೆ ಪ್ರಶಸ್ತಿ ಲಭಿಸಿದೆ? ಎಂದು ಪ್ರಶ್ನಿಸಿದ್ರು. ಇದಕ್ಕೆ ಖುಷಿ ಸ್ವಿಮ್ಮಿಂಗ್‌ನಲ್ಲಿ ನನಗೆ ಏಕಲವ್ಯ ಪ್ರಶಸ್ತಿ ಸಿಕ್ಕಿದೆ ಎಂದು ಉತ್ತರಿಸಿದ್ರು.

ಜಾಹೀರಾತು
ಜಾಹೀರಾತು