Recent Posts

Saturday, April 25, 2026
ಹೆಚ್ಚಿನ ಸುದ್ದಿ

ಅಯೋಧ್ಯೆ ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟಿನ ವಿಶ್ವಸ್ಥರಾದ ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಜ.13ರಂದು ಪುತ್ತೂರಿಗೆ ಭೇಟಿ-ಕಹಳೆ ನ್ಯೂಸ್

ಅಯೋಧ್ಯೆ ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟಿನ ವಿಶ್ವಸ್ಥರಾದ ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಜನವರಿ 13ರಂದು ಪುತ್ತೂರು ಒಕ್ಕಲಿಗ ಗೌಡ ಸಮುದಾಯ ಭವನ ತೆಂಕಿಲದಲ್ಲಿ ನಡೆಯಲಿರುವ ಮಾತೃ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬಳಿಕ ಗಣ್ಯರ ಸಭೆಯಲ್ಲೂ ಪಾಲ್ಗೊಳ್ಳಲಿದ್ದು,  ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಪ್ರಾಂತ ಸಂಘಟನಾ ಕಾರ್ಯದರ್ಶಿ, ಬಸವರಾಜು, ವಿಶ್ವ ಹಿಂದೂ ಪರಿಷತ್ ಪ್ರಾಂತ, ಕಾರ್ಯಾಧ್ಯಕ್ಷ ಎಂ ಬಿ ಪುರಾಣಿಕ್, ಶ್ರೀ ರಾಮ ಜನ್ಮಭೂಮಿ, ನಿಧಿ ಸಮರ್ಪಣಾ ಅಭಿಯಾನದ ಮಂಗಳೂರು ವಿಭಾಗ ಪ್ರಮುಖರಾದ ಶರಣ್ ಪಂಪ್ಟೆಲ್, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ರವೀಂದ್ರ, ಶ್ರೀ ರಾಮ ಜನ್ಮ ಭೂಮಿ ನಿಧಿ ಸಮರ್ಪಣಾ ಅಭಿಯಾನದ ಪುತ್ತೂರು ಜಿಲ್ಲಾ ಪ್ರಮುಖರಾದ ಮುರಳಿಕೃಷ್ಣ ಹಸಂತಡ್ಕ, ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಅಧ್ಯಕ್ಷರಾದ ಡಾ ಕೃಷ್ಣ ಪ್ರಸನ್ನ, ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಉಪಾಧ್ಯಕ್ಷರಾದ ಭಾಸ್ಕರ್ ಧರ್ಮಸ್ಥಳ ಅವರು ಭಾಗವಹಿಸಲಿದ್ದಾರೆ.