Recent Posts

Sunday, April 26, 2026
ಮೈಸೂರು

ನಾನು ದೇವಾಲಯಗಳಿಗೆ ಹೋಗುವುದು ಕಡಿಮೆ, ಕಷ್ಟದ ಸಂದರ್ಭ ಸ್ಪಂದಿಸುವುದರಲ್ಲಿ ದೇವರಿದ್ದಾನೆ ; ಸಿದ್ದರಾಮಯ್ಯ-ಕಹಳೆ ನ್ಯೂಸ್

ಮೈಸೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನಾನು ದೇವಾಲಯಗಳಿಗೆ ಹೋಗುವುದು ಕಡಿಮೆ. ಕಷ್ಟದ ಸಂದರ್ಭ ಸ್ಪಂದಿಸುವುದರಲ್ಲಿ ದೇವರಿದ್ದಾನೆ ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಟಿ.ನರಸೀಪುರದಲ್ಲಿ ಸಾರ್ವಜನಿಕರನ್ನುದ್ದೇಶೀಸಿ ಮಾತನಾಡಿದ ಅವರು, ನಾನು ದೇವಾಲಯಗಳಿಗೆ ಹೋಗುವುದು ಕಡಿಮೆ. ಮನೆಯಲ್ಲಿ ಪೂಜೆ ಮಾಡುವುದಿಲ್ಲ. ಹಾಗೆಂದು ದೇವರು ಇಲ್ಲ ಎಂದಲ್ಲ. ಕಷ್ಟ ಕಾಲದಲ್ಲಿ ದೇವರು ಸ್ಪಂದಿಸುತ್ತಾನೆ ಎಂದಿದ್ದಾರೆ. ಈ ಸಂದರ್ಭದಲ್ಲಿ ಪೂಜಾರಿಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕೆಲ ಪೂಜಾರಿಗಳು ತಟ್ಟೆ ಕಾಸಿಗಾಗಿ ಕಾಯುತ್ತಿರುತ್ತಾರೆ. ಪೂಜೆಯ ವೇಳೆಯಲ್ಲಿ ಮಂತ್ರ ಹೇಳುತ್ತಾ ಏನೇನೋ ಆಸೆ ಪಡುತ್ತಿರುತ್ತಾರೆ ಎಂದಿದ್ದಾರೆ.