
ಮಂಗಳೂರು : ಮರಕಡ ಜಂಕ್ಷನ್ ನಲ್ಲಿ ಬುಧವಾರದಂದು ಬೆಳಗ್ಗೆ ಖಾಸಗಿ ಬಸ್ಸಿನ ಅಡಿಗೆ ಬಿದ್ದು ಕಾಲೇಜು ವಿದ್ಯಾರ್ಥಿನಿಯೋರ್ವಳು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿನಿಯನ್ನು ಕಾವೂರು ಕುಂಜತ್ ಬೈಲ್ ಜ್ಯೋತಿನಗರ ನಿವಾಸಿ ಚೆಲ್ಲಯ್ಯ ಅವರ ಪುತ್ರಿ 21 ವರ್ಷದ ಸಿ. ಪ್ರವಿತ್ರ ಎಂದು ಗುರುತಿಸಲಾಗಿದೆ. ಈ ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.














