
ಪುತ್ತೂರು : ವಿವೇಕಾನಂದ CBSE ಸಂಸ್ಥೆಯ ನೂತನ ಕಟ್ಟಡವನ್ನು ನೆಹರು ನಗರದಲ್ಲಿರುವ ವಿವೇಕಾನಂದ ಕ್ಯಾಂಪಸ್ನಲ್ಲಿ ನಿರ್ಮಿಸಲಾಗಿದ್ದು, ಇದರ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 8ನೇ ಎಪ್ರಿಲ್ 2021, ಗುರುವಾರದಂದು ಸಂಜೆ 5.30ಕ್ಕೆ ಕರ್ನಾಟಕ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರು ಲೋಕಾರ್ಪಣೆಗೊಳಿಸಲಿದ್ದರು.
ಕಾರಣಾಂತರಗಳಿಂದ ನೂತನ ಕಟ್ಟಡದ ಲೋಕಾರ್ಪಣೆ ಕಾರ್ಯಕ್ರಮವನ್ನು ಮುಂದೂಡಲಾಗಿದ್ದು ಮುಂದಿನ ದಿನಾಂಕವನ್ನು ನಿಗದಿಪಡಿಸಿ ತಿಳಿಸಲಾಗುವುದು. ಸದ್ರಿ ಮಾಹಿತಿಯನ್ನು ತಾವು ಪತ್ರಿಕೆಯ ಹಾಗೂ ಮಾಧ್ಯಮದಲ್ಲಿ ಪ್ರಕಟಿಸಬೇಕಾಗಿ ಈ ಮೂಲಕ ವಿನಂತಿಸುತ್ತಿದ್ದೇವೆ.














