Friday, July 24, 2026
ಹೆಚ್ಚಿನ ಸುದ್ದಿ

ಮಾಜಿ ಸಚಿವ ಯು.ಟಿ. ಖಾದರ್ ಕಾರು ಅಪಘಾತ ; ಪ್ರಾಣಾಪಾಯದಿಂದ ಪಾರು-ಕಹಳೆ ನ್ಯೂಸ್

ದಾವಣಗೆರೆ : ಆನಗೋಡು ಬಸ್ ನಿಲ್ದಾಣದ ಸರ್ವಿಸ್ ರಸ್ತೆ ಸಮೀಪ ಇಂದು ಬೆಳಗ್ಗೆ ಮಾಜಿ ಸಚಿವ ಯು.ಟಿ. ಖಾದರ್ ವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಯು.ಟಿ ಖಾದರ್ ಅವರು ಬೆಳಗಾವಿ ಉಪಚುನಾವಣೆ ಪ್ರಚಾರಕ್ಕೆ ತೆರಳುತ್ತಿದ್ದರು. ಈ ವೇಳೆ ಆನಗೋಡು ಹಂಪ್ಸ್ ಸಮೀಪ ಮುಂದಡ ಸಾಗುತ್ತಿದ್ದ ಕಂಟೈನರ್‌ಗೆ ಕಾರು ಢಿಕ್ಕಿ ಹೊಡೆದಿದೆ ಇದರ ಪರಿಣಾಮ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಖಾದರ್ ಅವರು ಅಪಾಯದಿಂದ ಪಾರಾಗಿದ್ದಾರೆ. ಈ ಘಟನೆಯ ಬಳಿಕ ಖಾದರ್ ಅವರು ಬೆಂಗಳೂರಿಗೆ ಹಿಂದಿರುಗಿದ್ದು, ಘಟನಾ ಸ್ಥಳಕ್ಕೆ ಎಸ್.ಪಿ. ಹನುಮಂತರಾಯ ತೆರಳಿ, ಪರಿಶೀಲನೆ ನಡೆಸಿದ್ದಾರೆ.