Thursday, March 12, 2026
ಉಡುಪಿರಾಜ್ಯಸುದ್ದಿ

Breaking News : ರಾಜ್ಯದ ಈ ಪರಿಸ್ಥಿತಿಯಲ್ಲಿ ಸಿಎಂ ಬದಲಾವಣೆ ಮಾಡಬಾರದು ; ಬಿಜೆಪಿ ವರಿಷ್ಠರಿಗೆ ಪೇಜಾವರ ಶ್ರೀ ಸಲಹೆ – ಕಹಳೆ ನ್ಯೂಸ್

ಉಡುಪಿ: ರಾಜ್ಯದ ಈ ಪರಿಸ್ಥಿತಿಯಲ್ಲಿ ಸಿಎಂ ಬದಲಾವಣೆ ಮಾಡಬಾರದು ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಕಹಳೆ ಪ್ರತಿನಿಧಿ ಜೊತೆ ಮಾತನಾಡಿದ ಅವರು, ಸಿಎಂ ಬದಲಾವಣೆಗೆ ಈಗ ಪರಿಸ್ಥಿತಿ ಅನುಕೂಲಕರವಾಗಿಲ್ಲ. ನಾಯಕತ್ವ ಬದಲಾವಣೆ ಈಗ ಸೂಕ್ತವಲ್ಲ. ಇಷ್ಟು ಸಮಯ ಯಡಿಯೂರಪ್ಪ ಚೆನ್ನಾಗಿ ನಾಯಕತ್ವ ಮಾಡಿದ್ದಾರೆ. ಕೋವಿಡ್ ಸಂದರ್ಭವನ್ನು ಚೆನ್ನಾಗಿ ನಿಭಾಯಿಸಿದ್ದಾರೆ ಎಂದು ಸ್ವಾಮೀಜಿ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬಿಜೆಪಿ ಪಕ್ಷದ ಆಂತರಿಕ ವಿಚಾರ ನಮಗೆ ಗೊತ್ತಿಲ್ಲ. ಅಲ್ಲಿ ಏನು ಚರ್ಚೆಯಾಗಿದೆ ಎಂದು ನನಗೆ ಮಾಹಿತಿ ಇಲ್ಲ. ಆ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ಕೊಡುವುದಿಲ್ಲ. ಈ ಹಂತದಲ್ಲಿ ಸ್ಥಾನ ಬದಲಾವಣೆ ಸೂಕ್ತವಲ್ಲ ಅನ್ನೋದು ನನ್ನ ವೈಯಕ್ತಿಕ ಅಭಿಪ್ರಾಯ. ರಾಜ್ಯದಲ್ಲಿ ಪಕ್ಷ ಕಟ್ಟಿದ ರೀತಿ. ನಂತರ ಅವರ ಓಡಾಟ, ಎಲ್ಲವನ್ನೂ ಗಮನಿಸಿ ಈ ಹೇಳಿಕೆ ನೀಡುತ್ತಿದ್ದೇನೆ ಎಂದು ಕಹಳೆ ನ್ಯೂಸ್ ಕೇಬಲ್ ಟಿವಿಗೆ ಪೇಜಾವರ ಶ್ರೀ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು