
ಬೆಳಗಾವಿ: ಅತಿವೃಷ್ಟಿಯಿಂದ ಬೆಳಗಾವಿ ಜಿಲ್ಲೆಯ ಹೆಚ್ಚು ಹಾನಿಯಾದ ಪ್ರದೇಶಗಳಿಗೆ ಸಿಎಂ ಯಡಿಯೂರಪ್ಪ ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಇಂದು ಸಂಜೆ ಹೈಕಮಾಂಡ್ನಿ0ದ ಸಂದೇಶ ಬರಲಿದ್ದು, ಬಳಿಕ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವುದು ತಿಳಿಯಲಿದೆ ಎಂದು ಹೇಳಿದ್ದಾರೆ. ಯಾವುದೇ ಸ್ವಾಮೀಜಿಗಳು ಸಭೆ-ಸಮಾವೇಶ ಮಾಡುವ ಅಗತ್ಯವಿಲ್ಲ. ನನಗೆ ಮೋದಿ ಹಾಗೂ ಅಮಿತ್ ಶಾ ಅವರ ಮೇಲೆ ವಿಶ್ವಾಸವಿದ್ದು, ಈ ಎರಡು ವರ್ಷಗಳ ಕೆಲಸ ನಿಮಗೆ ತೃಪ್ತಿ ತಂದಿದ್ದರೆ ಸಾಕು ಎಂದು ಹೇಳಿದರು.













