Tuesday, March 10, 2026
ರಾಜಕೀಯ

ಮೇ.05 ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ – Kahale News

ಮಂಗಳೂರು, ಮೇ 2: ಮಂಗಳವಾರವಷ್ಟೇ ಪ್ರಧಾನಿ ನರೇಂದ್ರ ಮೋದಿ ಶ್ರೀಕೃಷ್ಣನ ನಾಡು ಉಡುಪಿಗೆ ಭೇಟಿ ನೀಡಿ ಚುನಾವಣೆಯ ಕಹಳೆ ಮೊಳಗಿಸಿದ್ದು, ಮತ್ತೆ ಕರಾವಳಿಗೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿದೆ.

ಇದೇ ಬರುವ ಮೇ 5 ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಮಾತ್ರವಲ್ಲ ನಗರದ ಕೇಂದ್ರ ಮೈದಾನದಲ್ಲಿ ಬೃಹತ್ ಚುನಾವಣಾ ಪ್ರಚಾರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೇ 5 ರಂದು 3.00 ಗಂಟೆಗೆ ಮಂಗಳೂರಿನ ಕೇಂದ್ರ ಮೈದಾನಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ, 4 ಗಂಟೆಗೆ ಪ್ರಚಾರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಳೆದ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನರೇಂದ್ರ ಮೋದಿಯವರು ವ್ಯಾಪಕ ಪ್ರಚಾರ ನಡೆಸಿದ್ದರೂ, ಅಲ್ಲಿನ ಎಂಟು ಕ್ಷೇತ್ರಗಳಲ್ಲಿ ಏಳನ್ನು ಕಾಂಗ್ರೆಸ್ ಗೆದ್ದಿತ್ತು. ಆದರೆ ಈ ಬಾರಿ ಬಿಜೆಪಿ ಗೆಲುವಿಗೆ ಕಾರ್ಯಕರ್ತರು ಶತಾಯಗತಾಯ ಪ್ರಯತ್ನ ನಡೆಸುತ್ತಿದ್ದಾರೆ. ರಾಜ್ಯಾದ್ಯಂತ ಚುನಾವಣೆಯ ಬಿಸಿ ಹೆಚ್ಚುತ್ತಿದ್ದಂತೆ ಕಾರ್ಯಕರ್ತರಲ್ಲಿ ಈ ಬಾರಿಯ ಚುನಾವಣೆ ಹೊಸ ಹುರುಪು ಮೂಡಿಸಿದೆ.

ಜಾಹೀರಾತು
ಜಾಹೀರಾತು