Recent Posts

Saturday, April 25, 2026
ಸುದ್ದಿ

ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ.

ಶ್ರೀನಗರ : ಇಲ್ಲಿನ ವಿಮಾನ ನಿಲ್ದಾಣದ ಸಮೀಪದಲ್ಲೇ ಇರುವ ಬಿಎಸ್‌ಎಫ್ ಕ್ಯಾಂಪ್‌ ಗುರಿಯಾಗಿರಿಸಿಕೊಂಡು ಉಗ್ರರು

ಮಂಗಳವಾರ ನಸುಕಿನ ವೇಳೆ ದಾಳಿ ನಡೆಸಿದ್ದು, ಮೂವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರತಿ ದಾಳಿಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ವಿಮಾನ ನಿಲ್ದಾಣದಲ್ಲಿ ಭದ್ರತಾ ಕಾರಣಗಳಿಗಾಗಿ ತಾತ್ಕಾಲಿಕವಾಗಿ ಎಲ್ಲಾ ವಿಮಾನಗಳ ಸಂಚಾರವನ್ನು ಸ್ಥಗಿತ ಗೊಳಿಸಲಾಗಿರುವ ಬಗ್ಗೆ ವರದಿಯಾಗಿದೆ.

ನಸುಕಿನ 4 ಗಂಟೆಯ ವೇಳೆ ಉಗ್ರರು ಹೊಂಚು ದಾಳಿ ನಡೆಸಿದ್ದು , ಕೆಲ ಉಗ್ರರು ಸಮೀಪದ ಪಕ್ಕದ ಕಟ್ಟಡದಲ್ಲಿ ಅವಿತು ಕುಳಿತಿದ್ದು ಅವರಿಗಾಗಿ ಭಾರೀ ಸಂಖ್ಯೆಯ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ. ರಾಷ್ಟ್ರೀಯ ರೈಫ‌ಲ್ಸ್‌, ಸಿಆರ್‌ಪಿಎಫ್ ಮತ್ತು ಶ್ರೀನಗರ ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.