
ಪುತ್ತೂರು: ಈ ಬಾರಿ ಕೋವಿಡ್ ಸಾಂಕ್ರಾಮಿಕ ಪಿಡುಗಿನಿಂದ ಸಂಭ್ರಮಾಚರಣೆಗೆ ನಿರ್ಬಂಧವನ್ನು ಹೇರಲಾಗಿದ್ದು, ಕೊರೊನಾ ಮಾರ್ಗಸೂಚಿಗೆ ಅನುಸಾರವಾಗಿ ಪ್ರಗತಿ ಸ್ಟಡಿ ಸೆಂಟರ್ ನಲ್ಲಿ 14ನೇ ವರ್ಷದ ಓಣಂ ಹಬ್ಬವನ್ನು ಬಹಳ ಸರಳವಾಗಿ ಆಚರಿಸಲಾಯಿತು. ಇನ್ನು ಪ್ರಗತಿ ಸ್ಟಡಿ ಸೆಂಟರ್ ನಲ್ಲಿ ಹೂವಿನ ರಂಗೋಲಿಯ ಭವ್ಯ ಅಲಂಕಾರದ ಮೂಲಕ ಓಣಂ ಹಬ್ಬವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಕೆ.ಹೇಮಲತಾ ಗೋಕುಲ್ನಾಥ್, ಉಪನ್ಯಾಸಕರ ವೃಂದ, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.















