
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೇಜ್ ಮಾಲೀಕ ಸಂಘ (ರಿ) ಮಂಗಳೂರು ಕಾರ್ಮಿಕ ಇಲಾಖೆ ಬೆಂಗಳೂರು ಮತ್ತು ದ.ಕ ಜಿಲ್ಲಾ ಸಾಮಾಜಿಕ ಭದ್ರತಾ ಮಂಡಳಿ ವತಿಯಿಂದ ಸುಮಾರು 500 ಮೆಕ್ಯಾನಿಕ್ ವೃತ್ತಿ ಬಾಂಧವರಿಗೆ ಆಹಾರ ಧಾನ್ಯಗಳ ಕಿಟ್ ಗಳನ್ನು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಇಂದು ಕುಡುಪು ಶ್ರೀ ದುರ್ಗಾ ಪದ್ಮಾ ಆಟೋವರ್ಕ್ ಸಭಾಂಗಣದಲ್ಲಿ ವಿತರಿಸಿದರು. ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಜನಾರ್ಧನ ಅತ್ತಾವರ, ಮಂಡಲ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಚ್ಚನಾಡಿ, ಪ್ರಮುಖರಾದ ಸುಜನ್ ದಾಸ್ ಕುಡುಪು, ರಾಜ್ ಗೋಪಾಲ್ ಹಾಗೂ ಗಣ್ಯರು ಉಪಸ್ಥಿತರಿದ್ದರು.















