Thursday, March 12, 2026
ಸುದ್ದಿ

ಕೋಲಾರ ಬಂದ್‍ನಲ್ಲಿ ಭಾಗಿಯಾಗದಂತೆ ನೋಟಿಸ್: ‘ಬಿಜೆಪಿ ಸರ್ಕಾರ ಜೆಡಿಎಸ್, ಕಾಂಗ್ರೆಸ್‍ನಂತೆ ವರ್ತಿಸುತ್ತಿದೆ’ -ಪ್ರಮೋದ್ ಮುತಾಲಿಕ್ ಕಿಡಿ- ಕಹಳೆ ನ್ಯೂಸ್

ಕೋಲಾರ: ದತ್ತ ಮಾಲಾಧಾರಿಗಳ ಮೇಲಿನ ಹಲ್ಲೆಯನ್ನು ಖಂಡಿಸಿ ನ.18ರಂದು ಕರೆದಿರುವ ಕೋಲಾರ್ ಬಂದ್‍ನಲ್ಲಿ ಪಾಲ್ಗೊಳ್ಳದಂತೆ ನನಗೆ ಎಂಟ್ರಿ ಬ್ಯಾನ್ ನೋಟಿಸ್ ನೀಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಮೂಲಕ “ರಾಜ್ಯ ಬಿಜೆಪಿ ಸರಕಾರ ಕಾಂಗ್ರೆಸ್ ಹಾಗೂ ಜೆಡಿಎಸ್‍ನಂತೆ ಧೋರಣೆಯನ್ನು ಪ್ರದರ್ಶಿಸುತ್ತಿದೆ ಹಿಂದೂ ನಾಯಕರನ್ನು ತಡೆದರೆ, ಹಿಂದುತ್ವವನ್ನು ತಡೆದಂತೆ” ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಾಹೀರಾತು
ಜಾಹೀರಾತು

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರದ ಘಟನೆ ಖಂಡಿಸಿ ಶ್ರೀರಾಮ ಸೇನೆ, ವಿಶ್ವ ಹಿಂದೂ ಪರಿಷತ್, ಹಿಂದೂ ಜಾಗಹರಣ ಸಮಿತಿ ಸೇರಿದಂತೆ ಅನೇಕ ಹಿಂದೂಪರ ಸಂಘಟನೆಗಳು ಬಂದ್‍ಗೆ ಕರೆ ನೀಡಿದ್ದು, ಶಾಂತಿಯುತ ಬಂದ್‍ನಲ್ಲಿ ಪಾಲ್ಗೊಳ್ಳಬೇಕೆಂದಿರುವ ನನಗೆ ಅನಾವಶ್ಯಕವಾಗಿ ಇಂದು ಸಂಜೆ 6 ಗಂಟೆಗೆ ಕೋಲಾರ್ ಎಂಟ್ರಿ ಬ್ಯಾನ್ ನೋಟಿಸ್ ಜಾರಿಗೊಳಿಸಿದ್ದಾರೆ.

ಈ ಮೂಲಕ ದತ್ತ ಮಾಲಾಧಾರಿಗಳ ಹಲ್ಲೆಕೋರರಿಗೆ ಸರಕಾರವೇ ಬೆಂಬಲವಾಗಿ ನಿಲ್ಲುತ್ತಿದೆ ಎಂದಿದ್ದಾರೆ. ದಶಕಗಳ ಹಿಂದೆ ನನ್ನ ವಿರುದ್ಧ ದಾಖಲಾಗಿರುವ ಅನೇಕ ಪ್ರಕರಣಗಳನ್ನು ಅದರಲ್ಲಿ ಉಲ್ಲೇಖಿಸಲಾಗಿದೆ. ಆದರೆ, ಅದರಲ್ಲಿನ ಯಾವುದೇ ಪ್ರಕರಣ ಈಗ ಚಾಲ್ತಿಯಲ್ಲಿಲ್ಲ. ಆ ಎಲ್ಲ ಪ್ರಕರಣಗಳಲ್ಲಿ ನಾನು ನಿರ್ದೋಷಿಯಾಗಿದ್ದೇನೆ. ಹೀಗಾಗಿ ತಕ್ಷಣವೇ ಕೋಲಾರ ಜಿಲ್ಲಾಧಿಕಾರಿಗಳು ಈ ಆದೇಶವನ್ನು ಹಿಂಪಡೆಯಬೇಕು. ಈ ಬಗ್ಗೆ ನಮ್ಮ ವಕೀಲರೊಂದಿಗೆ ಚರ್ಚಿಸಿದ್ದು, ತುರ್ತು ತಡೆಯಾಜ್ಞೆ ಪಡೆದುಕೊಂಡು, ಕೋಲಾರ್ ಬಂದ್‍ನಲ್ಲಿ ಪಾಲ್ಗೊಳ್ಳುವುದಾಗಿ ಪ್ರಮೋದ್ ಮುತಾಲಿಕ್ ತಿಳಿಸಿದ ಅವರು, ಹಿಂದುತ್ವದ ಹೆಸರಲ್ಲಿ ಅಧಿಕಾರಕ್ಕೆ ಬಂದಿರುವ ಈ ಸರಕಾರ, ಹಿಂದೂಗಳ ಮೇಲಿನ ಹಲ್ಲೆ, ತಲಿಬಾನ್ ಕೃತ್ಯವನ್ನು ಪರೋಕ್ಷವಾಗಿ ಸಮರ್ಥಿಸಿಕೊಳ್ಳುತ್ತಿದೆ. ಇದೊಂದು ನಿರ್ಲಜ್ಜ ಸರಕಾರವೆಂದು ಆಕ್ರೋಶ ವ್ಯಕ್ತಪಡಿಸಿದರು.