Sunday, May 19, 2024
ಸುದ್ದಿ

ಅಡ್ಯಾರ್ ಗಾರ್ಡನ್ ನಲ್ಲಿ ಮೇ 27ರಂದು ಯಕ್ಷಧ್ರುವ ಪಟ್ಲ ಸಂಭ್ರಮ – 2018 ; ಯಕ್ಷಗಾನ ಲೋಕದ ಅಪೂರ್ವ ಅತ್ಯುನ್ನತ ಸಂಯೋಜನೆ – ಕಹಳೆ ನ್ಯೂಸ್

ಮಂಗಳೂರು: ಯಕ್ಷಗಾನ ಕಲಾಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಕಲಾವಿದರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ, ಖ್ಯಾತ ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿ ಅವರು ಸ್ಥಾಪಿಸಿದ ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ನ ೩ನೇ ವರ್ಷದ ಪಟ್ಲ ಸಂಭ್ರಮ-೨೦೧೮ ಕಾರ್ಯಕ್ರಮವು ಮೇ ೨೭ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿದೆ.

ಜಾಹೀರಾತು
ಜಾಹೀರಾತು

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ನ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ಮೇ 27ರಂದು ಅಡ್ಯಾರ್ ಗಾರ್ಡನ್ ನಲ್ಲಿ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 8 ರಿಂದ ರಾತ್ರಿ 12 ಗಂಟೆಯವರೆಗೆ ಸಂಭ್ರಮ ನಡೆಯಲಿದ್ದು, ಬೆಳಗ್ಗೆ 8ರಿಂದ ಚೆಂಡೆ ಜುಗಲ್ ಬಂದಿ, ಸ್ಪರ್ಧಾತ್ಮಕ ಪೀಠಿಕೆ ಸ್ತ್ರೀವೇಷ, ಉದ್ಘಾಟನಾ ಸಮಾರಂಭ, ಬಳಿಕ ರಕ್ತದಾನ ಶಿಬಿರ, ಯಕ್ಷಗಾನ ಕಲಾವಿದರು, ಅವರ ಮನೆಯವರಿಗೆ ಉಚಿತ ವೈದ್ಯಕೀಯ ತಪಾಸಣೆ, ಉಚಿತ ಔಷಧಿ ವಿತರಣೆ, ೧೧ರಿಂದ ಯಕ್ಷಸಪ್ತಸ್ವರ ಗಾನವೈಭವ, ಮಧ್ಯಾಹ್ನ ಮಹಿಳಾ ಯಕ್ಷಗಾನ ಪ್ರದರ್ಶನ, ಯಕ್ಷಗಾನ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಛಂದೋಬ್ರಹ್ಮ ಡಾ.ಶಿಮಂತೂರು ನಾರಾಯಣ ಶೆಟ್ಟಿಯವರಿಗೆ ಒಂದು ಲಕ್ಷ ರೂ ನಗದಿನೊಂದಿಗೆ ಪಟ್ಲ ಪ್ರಶಸ್ತಿ-2018 ಪ್ರದಾನ ಮಾಡಲಾಗುವುದು. ವೃತ್ತಿಕಕಲಾವಿದರಾದ ಕುರಿಯ ಗಣಪತಿ ಶಾಸ್ತ್ರಿ, ಆರ್ಗೋಡು ಮೋಹನ್ ದಾಸ್ ಶೆಣೈ, ಎಂ.ಕೆ. ರಮೇಶ್ ಆಚಾರ್ಯ, ಆನಂದ್ ಶೆಟ್ಟಿ ಐರಬೈಲು, ಹವ್ಯಾಸಿ ಕಲಾವಿದರಾದ ಕುತ್ತೊಟ್ಟು ವಾಸು ಶೆಟ್ಟಿ ಮತ್ತು ಪಾರೆಕೋಡಿ ಗಣಪತಿ ಭಟ್ ಹಾಗೂ ಮಹಿಳಾ ಕಲಾವಿದೆಯರಾದ ಶೀಲಾ ಕೆ. ಶೆಟ್ಟಿ, ಮತ್ತು ಮಹಾಲಕ್ಷ್ಮೀ ಡಿ.ರಾವ್ ಇವರಿಗೆ ಯಕ್ಷಧ್ರುವ ಕಲಾ ಗೌರವ ನೀಡಿ ಸನ್ಮಾನಿಸಲಾಗುವುದು. ಕೀರ್ತಿಶೇಷ ಕುಬಣೂರು ಶ್ರೀಧರ್ ರಾವ್ ಅವರಿಗೆ ಮರಣೋತ್ತರ ಪ್ರಶಸ್ತಿ ನೀಡಲಾಗುವುದು ಎಂದು ಪಟ್ಲ ಸತೀಶ್ ಶೆಟ್ಟಿ ತಿಳಿಸಿದರು.

ಜಾಹೀರಾತು

ಇದರ ಜೊತೆಗೆ ಕಲಾವಿದರ ಮಕ್ಕಳಿಗೆ ವಿದ್ಯಾರ್ಥಿವೇತನ, ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ, ಜೊತೆಗೆ ಕಲಾವಿದರಿಗೆ ತಲಾ 50 ಸಾವಿರ ಪ್ರೋತ್ಸಾಹಧನ, ೧೫ ಮಂದಿ ಅಶಕ್ತ ಕಲಾವಿದರಿಗೆ ಗೃಹ ನಿರ್ಮಾಣಕ್ಕೆ ತಲಾ 25 ಸಾವಿರ ಸಹಾಯಧನ, ನೀಡಲಾಗುವುದು. ಡಾ. ಶಿಮಂತೂರು ನಾರಾಯಣ ಶೆಟ್ಟಿ ಹಾಗೂ ಗಣೇಶ್ ಕೊಲಕಾಡಿ ವಿರಚಿತ ಯಕ್ಷಗಾನ ಪ್ರಸಂಗಗಳ ಸಂಪುಟ ಪ್ರಕಾಶನ ಕೃತಿ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ನ ಚಾಲೆಂಜಿಂಗ್ ಸ್ಟಾರ್ ದರ್ಶನ್, ಕಿರಿಕ್ ಪಾರ್ಟಿ ಖ್ಯಾತಿಯ ರಿಷಭ್ ಶೆಟ್ಟಿ ಭಾಗವಹಿಸಿ ತಾರಾ ಮೆರುಗು ನೀಡಲಿದ್ದಾರೆ ಎಂದು ಪಟ್ಲ ಸತೀಶ್ ಶೆಟ್ಟಿ ಮಾಹಿತಿ ನೀಡಿದರು.

https://youtu.be/YQDQBIOeSxE

 

https://youtu.be/pWuHzhST6fA

ಸುದ್ದಿಗೋಷ್ಠಿಯಲ್ಲಿ ಟ್ರಸ್ಟ್ ನ ಪದಾಧಿಕಾರಿಗಳಾದ ಪುರುಷೋತ್ತಮ ಭಂಡಾರಿ, ಮನು ರಾವ್, ನವನೀತ್ ಶೆಟ್ಟಿ, ಜಗನ್ನಾಥ್ ಶೆಟ್ಟಿ ಬಾಳ, ಸುದೇಶ್ ಕುಮಾರ್ ರೈ, ಪೂರ್ಣಿಮಾ ರೈ ಉಪಸ್ಥಿತರಿದ್ದರು.

ಯಕ್ಷಧ್ರುವ ಪಟ್ಲ ಸಂಭ್ರಮ 2018 ಕಾರ್ಯಕ್ರಮದ ಪತ್ರಿಕಾ ಗೋಷ್ಠಿ :
ಮಂಗಳೂರು ಘಟಕದ ಸದಸ್ಯರೂ ಹಾಗೂ ಪಟ್ಲರ ಕಟ್ಟಾ ಅಭಿಮಾನಿ ಶ್ರೀ ಸಂತೋಷ್ ಕುಮಾರ್ ರೈ ನೆಲ್ಯಾಡಿಯವರ ಅಟೋರಿಕ್ಷದಲ್ಲಿ ಪಟ್ಲ ಸಂಭ್ರಮ 2018ರ ಪ್ರಚಾರ.
ಫೇಸ್ಬುಕ್ ನಲ್ಲಿ ಪಟ್ಲ ಸಂಭ್ರಮದ ಫ್ರೇಮ್ !
ಯುವಕ ಪ್ರೋಫೈಲ್ ಫೋಟೋಗಳಲ್ಲೂ ಪಟ್ಲ ಪಟ್ಲ ಪಟ್ಲ!

ಪಟ್ಲ ಸತೀಶ್ ಶೆಟ್ಟಿಯವರಿಂದ ‘ ಪಟ್ಲ ಸಂಭ್ರಮ – 2018 ಕಾರ್ಯಕ್ರಮದ ಮಾಹಿತಿ :

https://youtu.be/1-mW-8rhUto