ವಿಧಾನ ಪರಿಷತ್ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಕೋಟ ಶ್ರೀನಿವಾಸ ಪೂಜಾರಿ – ಕಹಳೆ ನ್ಯೂಸ್

ಮಂಗಳೂರು: ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಪೂರ್ಣ ಗೊಂಡಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ದ್ವಿ ಸದಸ್ಯ ಕ್ಷೇತ್ರದಿಂದ ಪರಿಷತ್ ಚುನಾವಣೆಗೆ ಸ್ಪರ್ಧಿಸಿದ ಸಚಿವ ಕೋಟ
ಶ್ರೀನಿವಾಸ ಪೂಜಾರಿ ಜಯ ಗಳಿಸಿದ್ದಾರೆ.
ದ.ಕ. ಜಿಲ್ಲೆಯ 231 ಹಾಗೂ ಉಡುಪಿ ಜಿಲ್ಲೆಯ 158 ಒಟ್ಟು 389 ಮತಗಟ್ಟೆಗಳಲ್ಲಿ 6013 ಮಂದಿ ಮತದಾನವಾಗಿತ್ತು.
ಇದರಲ್ಲಿ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ 3697 ಮತಗಳನ್ನು ಪಡೆದು ಗೆಲುವು ಸಾಧಿಸಿ, ಮೂರನೇ ಬಾರಿಗೆ ವಿಧಾನ ಪರಿಷತ್ ಪ್ರವೇಶಿಸಿದ್ದಾರೆ.














