Friday, March 13, 2026
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಯಶಸ್ವಿಯಾಗಿ ನೆರವೇರಿದ ಜಾತ್ರೋತ್ಸವ- ಕಹಳೆ ನ್ಯೂಸ್

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ೨ ದಿನ ಜಾತ್ರೋತ್ಸವ ಹಾಗೂ ಪರಿವಾರ ದೈವಗಳ ಗಗ್ಗರ ಸೇವೆ ನಡೆದಿದೆ. ನಿನ್ನೆ ರಂಗ ಪೂಜೆ ,ಭಜನೆ , ನೇಮೋತ್ಸವ ನಡೆದಿದ್ದು, ಜೊತೆಗೆ ಧಾಮಿಕ ಸಭಾ ಕಾರ್ಯಕ್ರಮ ಕೂಡ ನೆರವೇರಿದೆ. ಕಾರ್ಯಕ್ರಮದಲ್ಲಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜ್‌ನ ಕನ್ನಡ ಉಪನ್ಯಾಸಕರಾದ ಮಹಾವೀರ ಜೈನ್ ಅವರು ಧಾರ್ಮಿಕ ಉಪನ್ಯಾಸವನ್ನು ನೀಡಿದ್ರು. ಈ ವೇಳೆ ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಜತ್ತನ್ನ ಗೌಡ ಏರ್ದೊಟು, ಆಡಳಿತ ಮೋಕ್ತೇಸರರಾದ ಜೀವಂಧರ ಜೈನ್, ವ್ಯವಸ್ಥಾಪನ ಸಮಿತಿ ಅಧಕ್ಷರಾದ ಶ್ರೀನಿವಾಸ ಗೌಡ, ಧಾರ್ಮಿಕ ಉಪನ್ಯಾಸ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು