ಮುಕ್ಕದ ಶ್ರೀ ಸಾಯಿ ಸಂಘದಲ್ಲಿ ರಕ್ತದಾನ ಶಿಬಿರ – ಶಿಬಿರ ಉದ್ಘಾಟಿಸಿದ ಶಾಸಕ ಡಾ.ಭರತ್ ಶೆಟ್ಟಿ ವೈ – ಕಹಳೆ ನ್ಯೂಸ್

ಶ್ರೀ ಸಾಯಿ ಫ್ರೆಂಡ್ಸ್ ಸರ್ಕಲ್, ಚೆಕ್ ಪೋಸ್ಟ್, ಮುಕ್ಕ ಮತ್ತು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಸಹಭಾಗಿತ್ವದಲ್ಲಿ, ಮುಕ್ಕದ ಶ್ರೀ ಸಾಯಿ ಸಂಘದಲ್ಲಿ ರಕ್ತದಾನ ಶಿಬಿರ ನಡೆದಿದೆ. ಶಿಬಿರವನ್ನ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಉದ್ಘಾಟಿಸಿದರು. ಶಿಬಿರದಲ್ಲಿ ಸ್ಥಳೀಯ ಕಾರ್ಪೊರೇಟರ್ ಶೋಭಾ ರಾಜೇಶ್, ಶ್ರೀ ಸಾಯಿ ಫ್ರೆಂಡ್ಸ್ ಸರ್ಕಲ್ ಪದಾಧಿಕಾರಿಗಳು, ಪ್ರಮುಖರು, ವೆನ್ಲಾಕ್ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು, ಗಣ್ಯರು ಉಪಸ್ಥಿತರಿದ್ದರು.















