Tuesday, April 28, 2026
ದಕ್ಷಿಣ ಕನ್ನಡಸುದ್ದಿ

ಮಂಗಳೂರು: ನಿಲ್ಲಿಸಿದ ಕಾರಿನಲ್ಲಿ ಬೆಂಕಿ ಅವಘಡ- ಕಹಳೆ ನ್ಯೂಸ್

ಮಂಗಳೂರು : ಆಕಸ್ಮಿಕ ಬೆಂಕಿ ಅನಾಹುತಕ್ಕೆ ಕಾರೊಂದು ಸುಟ್ಟು ಕರಕಲಾದ ಘಟನೆ ಶಕ್ತಿನಗರದ ಬಳಿ ರಾತ್ರಿ ನಡೆದಿದೆ.

ಮಹಿಳೆಯೊಬ್ಬರು ಶಕ್ತಿನಗರದಲ್ಲಿ ಸ್ವಿಫ್ಟ್ ಕಾರು ನಿಲ್ಲಿಸಿ ತನ್ನ ಮೊಬೈಲನ್ನು ಕಾರಿನೊಳಗಿಟ್ಟು ತೆರಳಿದ್ದರು. ಮರಳಿ ಬರುವಷ್ಟರಲ್ಲಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ತಕ್ಷಣ ಅವರು ಸ್ಥಳೀಯರಿಗೆ ತಿಳಿಸಿದ್ದು, ಮಾಹಿತಿ ಪಡೆದ ಅಗ್ನಿಶಾಮಕ ದಳದ ಅಧಿಕಾರಿ, ಸಿಬ್ಬಂದಿ ವರ್ಗವು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಆದರೆ ಕಾರು ಸುಟ್ಟು ಹೋಗಿದೆ ಎಂದು ತಿಳಿದು ಬಂದಿದೆ.