ಪುತ್ತೂರು: ಆರ್ಯಾಪು ಬೂಡಿಯಾರು ಹೊಸಮನೆ ಶ್ರೀ ಚಕ್ರರಾಜರಾಜೇಶ್ವರಿ ದೇವಸ್ಥಾನದಲ್ಲಿ ಆ.5ರಂದು ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯ ನೇತೃತ್ವದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ ನಡೆಯಲಿದೆ.
ಸಾರ್ವಜನಿಕ ಅನ್ನಸಂತರ್ಪಣೆ ಇರುವುದರಿಂದ ಭಕ್ತಾಧಿಗಳು ನೀಡುವ ಅಕ್ಕಿ, ತೆಂಗಿನಕಾಯಿ, ತರಕಾರಿಗಳನ್ನು ಕೃತಜ್ಞಾಪೂರ್ವಕವಾಗಿ ಸ್ವೀಕರಿಸಲಾಗುವುದು ಹಾಗೂ ಭಕ್ತಾಧಿಗಳು ತನು, ಮನ, ಧನಗಳಿಂದ ಸಹಾಯವನ್ನಿತ್ತು ಸಹಕರಿಸಬೇಕಾಗಿ ದೇವಸ್ಥಾನದ ಪ್ರಕಟಣೆ ತಿಳಿಸಿದೆ.















